ದುಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತಿದೆ.
ಚೆನ್ನೈ ನೀಡಿದ 157 ರನ್ ಗಳ ಸಾಧಾರಣ ಗುರಿಯನ್ನು ಬೆನ್ನುಹತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 20 ರನ್ ಗಳ ಅಂತರದಲ್ಲಿ ಚೆನ್ನೈ ಎದುರು ಮಂಡಿಯೂರಿತು. ಮುಂಬೈ ಪರ ಸೌರಭ್ ತಿವಾರಿ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದಾವ ಆಟಗಾರರಿಂದಲೂ ಉತ್ತಮ ಪ್ರದರ್ಶನ ಮೂಡಿಬರಲಿಲ್ಲ.
ಇತ್ತ ಚೆನ್ನೈ ಪರ ಡ್ವೇಯ್ನ್ ಬ್ರಾವೋ 3 ವಿಕೆಟ್ ಕಬಳಿಸಿದರೆ, ದೀಪಕ್ ಚಹರ್ 2 ಮತ್ತು ಜೋಷ್ ಹೇಜಲ್ ವುಡ್ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಕಬಳಿಸಿದರು. ಅಂತೆಯೇ ಚೆನ್ನೈ ಪರ ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ ರಿತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.