ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನವೇ ಬಾಕಿವಿದ್ದು, ಇದರ ನಡುವೆ ಭಯೋತ್ಪಾದಕ ಬೆದರಿಕೆ ಬಂದಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂ, ಟ್ರೈಡೆಂಟ್ ಹೋಟೆಲ್ ಮತ್ತು ಸುತ್ತಮುತ್ತಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ವಾಂಖೆಡೆ ಸ್ಟೇಡಿಯಂ, ಟ್ರೈಡೆಂಟ್ ಹೋಟೆಲ್ ಮತ್ತು ಸುತ್ತಮುತ್ತಲಿನ ರಸ್ತೆಯಲ್ಲಿ ಭಯೋತ್ಪಾದಕರು ದಾಳಿ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ವಿಚಾರಣೆ ವೇಳೆ ಪತ್ತೆ ಹಚ್ಚಿದೆ.
ಭಯೋತ್ಪಾದಕರ ಈ ತಪ್ಪೊಪ್ಪಿಗೆಗಳ ಹಿನ್ನೆಲೆಯಲ್ಲಿ, ಐಪಿಎಲ್ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಭದ್ರತೆಯನ್ನ ಹೆಚ್ಚಿಸಲಾಗಿದೆ. ಕ್ವಿಕ್ ರೆಸ್ಪಾನ್ಸ್ ಟೀಮ್, ಬಾಂಬ್ ಸ್ಕ್ವಾಡ್, ರಾಜ್ಯ ಮೀಸಲು ಪೊಲೀಸ್ ಪಡೆಯನ್ನು ಮಾರ್ಚ್ 26 ರಿಂದ ಮೇ 22ರವರೆಗೆ ಭದ್ರತೆಗಾಗಿ ನಿಯೋಜಿಸಲಾಗಿದೆ.