Categories: ಕ್ರೀಡೆ

ಐಪಿಎಲ್ ಹರಾಜು ಪ್ರಕ್ರಿಯೆ: 10 ಕೋಟಿಗೆ ಹರಾಜಾದ ಕನ್ನಡಿಗ ಪ್ರಸಿದ್ಧ್

ಬೆಂಗಳೂರು(ಫೆ.12) : ಐಪಿಎಲ್ ಹರಾಜು ಪ್ರಕ್ರಿಯೆಲ್ಲಿ ಯುವ ಬೌಲರ್‌ಗಳು ದಾಖಲೆ ಮೊತ್ತಕ್ಕೆ ಹರಾಜಾಗುತ್ತಿದ್ದಾರೆ. ದೀಪಕ್ ಚಹಾರ್ 14 ಕೋಟಿ ರೂಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾದ ಬೆನ್ನಲ್ಲೇ , ಇದೀಗ ಯುವ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ 10 ಕೋಟಿ ರೂಪಾಯಿಗೆ ರಾಜಸ್ಥಾನ ರಾಯಲ್ಸ್ ಪಾಲಾಗಿದ್ದಾರೆ.

1 ಕೋಟಿ ರೂಪಾಯಿ ಮೂಲ ಬೆಲೆ ಹೊಂದಿದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಖರೀದಿಗೆ ರಾಜಸ್ಥಾನ ರಾಯಲ್ಸ್ ಜೊತೆಗೆ ಗುಜರಾತ್ ಟೈಟಾನ್ಸ್, ಲಕ್ನೋ ಸೇರಿದಂತೆ ಕೆಲ ಫ್ರಾಂಚೈಸಿಗಳು ಮುಗಿಬಿದ್ದಿತ್ತು. ಜಿದ್ದಾಜಿದ್ದಿನ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ 10 ಕೋಟಿ ರೂಪಾಯಿಗೆ ಬಿಡ್ಡಿಂಗ್ ಮಾಡಿತು.

ಯುವ ವೇಗಿ ಪ್ರಸಿದ್ಧ್ ಕೃಷ್ಣ ಖರೀದಿಗೆ ಫ್ರಾಂಚೈಸಿ ಮುಗಿ ಬೀಳಲು ಕಾರಣವಿದೆ. ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ ಗರಿಷ್ಠ ವಿಕೆಟ್ ಕಬಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರಸಿದ್ಧ್ ಕೃಷ್ಣ 9 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ವಿಂಡೀಸ್ ಕ್ರಿಕೆಟಿಗ ಅಲ್ಜಾರಿ ಜೋಸೆಫ್ 6 ವಿಕೆಟ್ ಕಬಳಿಸಿದ್ದಾರೆ. ವಿಂಡೀಸ್ ವಿರುದ್ದಧ 3ನೇ ಏಕದಿನ ಪಂದ್ಯದಲ್ಲಿ ಪ್ರಸಿದ್ಧ್ 3 ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಕ ಪಾತ್ರ ನಿರ್ವಹಿಸಿದ್ದರು.

ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ಪರ ಆಡಿದ್ದ ಪ್ರಸಿದ್ಧ ಕೃಷ್ಣ 10 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ. ಇನ್ನು 2018ರಲ್ಲಿ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ ಪ್ರಸಿದ್ಧ್ 30 ವಿಕೆಟ್ ಕಬಳಿಸಿದ್ದಾರೆ.

2015ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪ್ರಸಿದ್ಧ್ ಕೃಷ್ಣ ಮೊದಲ ಎಸತದಲ್ಲೇ ವಿಕೆಟ್ ಕಬಳಿಸಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದರು. ಅತ್ಯುತ್ತಮ ಪ್ರದರ್ಶನ ನೀಡಿದರೂ ಅವಕಾಶ ಸಿಗದ ಪ್ರಸಿದ್ಧ್ ಕೃಷ್ಣ 2017-18ರ ಸಾಲಿನ ವಿಜಯ್ ಹಜಾರೆ ಟೂರ್ನಿಯಲ್ಲಿ ಪ್ರಸಿದ್ಧ್ 8 ಪಂದ್ಯಗಳಿಂದ 17 ವಿಕೆಟ್ ಕಬಳಿಸಿ ಮಿಂಚಿದ್ದರು. ಇಷ್ಟೇ ಅಲ್ಲ ಎರಡನೇ ಗರಿಷ್ಠ ವಿಕೆಟ್ ಟೇಕರ್ ಅನ್ನೋ ಹೆಗ್ಗಳಿಕೂ ಪಾತ್ರರಾಗಿದ್ದರು. ಸೌರಾಷ್ಟ್ರ ವಿರುದ್ದದ ಫೈನಲ್ ಪಂದ್ಯದಲ್ಲಿ ಪ್ರಸಿದ್ಧ್ 37 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಈ ಮೂಲಕ ಕರ್ನಾಟಕ ತಂಡಕ್ಕೆ 2017-18ರ ಸಾಲಿನ ವಿಜಯ್ ಹಜಾರೆ ಟ್ರೋಫಿ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ಬೌಲರ್ ಆಗಿ ಉತ್ತಮ ನಿರ್ವಹಣೆ ತೋರಿದ ಪ್ರಸಿದ್ಧ್ ಕೃಷ್ಣ ಇದೀಗ 10 ಕೋಟಿ.

Gayathri SG

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

8 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

22 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

38 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago