Categories: ಕ್ರೀಡೆ

ಐಸಿಸಿ ಟೆಸ್ಟ್ ಪಂದ್ಯದ ನಂತರ ಕ್ರಿಕೆಟಿಗೆ ವಿದಾಯ ಹೇಳುತ್ತಿದ್ದಾರೆ ಬಿ.ಜೆ ವ್ಯಾಟ್ಲಿಂಗ್

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಬಿ.ಜೆ.ವ್ಯಾಟ್ಲಿಂಗ್‌, ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ಭಾರತ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ನಾನು ನಿವೃತ್ತಿ ಪಡೆಯಲು ಇದು ಸರಿಯಾದ ಸಮಯವೆನಿಸುತ್ತಿದೆ. ನ್ಯೂಜಿಲೆಂಡ್ ತಂಡವನ್ನು ಅದರಲ್ಲೂ ಟೆಸ್ಟ್ ಜೆರ್ಸಿಯೊಂದಿಗೆ ಆಡುವುದು ನನಗೆ ಸಿಕ್ಕ ಅತಿದೊಡ್ಡ ಗೌರವ. ಬಿಳಿ ಜೆರ್ಸಿಯೊಂದಿಗಿನ ಪ್ರತಿಕ್ಷಣವನ್ನು ನಾನು ಎಂಜಾಯ್ ಮಾಡಿದ್ದೇನೆ ಎಂದು ವ್ಯಾಟ್ಲಿಂಗ್ ತಿಳಿಸಿದ್ದಾರೆ. ಇಂಗ್ಲೆಂಡ್‌ ವಿರುದ್ದದ 2 ಟೆಸ್ಟ್‌ ಹಾಗೂ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಬಳಿಕ ವ್ಯಾಟ್ಲಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ವಿದಾಯ ಹೊಂದಲಿದ್ದಾರೆ.

35 ವರ್ಷದ ವ್ಯಾಟ್ಲಿಂಗ್‌ ಕಳೆದೊಂದು ದಶಕದಿಂದ ನ್ಯೂಜಿಲೆಂಡ್‌ ಟೆಸ್ಟ್‌ ತಂಡದ ಪ್ರಮುಖ ಸದಸ್ಯರಾಗಿದ್ದು, ವಿಶ್ವ ಶ್ರೇಷ್ಠ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರೆನಿಸಿಕೊಂಡಿದ್ದಾರೆ. ಅಲ್ಲದೇ ಹಲವಾರು ದಾಖಲೆಗಳನ್ನು ಸಹ ಬರೆದಿದ್ದಾರೆ. ಐಸಿಸಿ ಟೆಸ್ಟ್ ಚಾಂಪಿಯನ್‌ ಫೈನಲ್‌ ಪಂದ್ಯವು ಜೂನ್ 18 ರಿಂದ 22ರವರೆಗೆ ಸೌಥಾಂಪ್ಟನ್‌ನಲ್ಲಿ ನಡೆಯಲಿದೆ.

ವ್ಯಾಟ್ಲಿಂಗ್‌ ತಮ್ಮ ವಿದಾಯಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಬಲಿ ಪಡೆದ ನ್ಯೂಜಿಲೆಂಡ್ ವಿಕೆಟ್ ಕೀಪರ್, ಕಿವೀಸ್‌ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಬಾರಿಸಿದ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್(3773) ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ವೈಯುಕ್ತಿಕ ಗರಿಷ್ಠ ರನ್‌ ಬಾರಿಸಿದ ವಿಕೆಟ್‌ ಕೂಪರ್‌ ಬ್ಯಾಟ್ಸ್‌ಮನ್(205) ಹಾಗೂ ನ್ಯೂಜಿಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಶತಕ(07) ಬಾರಿಸಿದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಎನ್ನುವ ದಾಖಲೆಯನ್ನು ನಿರ್ಮಿಸಿದ್ದಾರೆ.

Desk

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 min ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

14 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

36 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

41 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

54 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

57 mins ago