ನವದೆಹಲಿ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಒಂದರ ಮೇಲೊಂದು ಬಹುಮಾನ ಘೋಷಣೆಯಾಗುತ್ತಿದೆ. ಚಾನು ಅವರಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ ಮಾಡಿದ್ದಾರೆ.
49 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆಯಾಗಿದೆ.
‘ಭಾರತದ ಹೆಮ್ಮೆ ಮೀರಾಬಾಯಿ ಚಾನು ಅವರಿಗೆ ಭಾರತೀಯ ರೈಲ್ವೆ ಅಭಿನಂದನೆ ಸಲ್ಲಿಸುತ್ತದೆ ಮತ್ತು ಅವರ ಸಾಧನೆಯನ್ನು ಗೌರವಿಸುತ್ತದೆ. ಇದರೊಂದಿಗೆ 2 ಕೋಟಿ ರೂಪಾಯಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡಲಾಗುವುದು. ಭಾರತಕ್ಕಾಗಿ ಹೀಗೆ ಗೆಲ್ಲುತ್ತಲೇ ಇರಬೇಕು’ ಎಂದು ಅಶ್ವಿನಿ ವೈಷ್ಣವ್ ಆಶಿಸಿದರು.
29 ವರ್ಷದ ಮೀರಾಬಾಯಿ ಒಟ್ಟು 202 ಕೆ.ಜಿ (87 ಕೆ.ಜಿ. ಹಾಗೂ 115 ಕೆ.ಜಿ.) ಭಾರ ಎತ್ತುವ ಮೂಲಕ ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿದರು.