Categories: ಕ್ರೀಡೆ

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬಹುಮಾನಗಳ ಸುರಿಮಳೆ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರಿಗೆ ಒಂದರ ಮೇಲೊಂದು ಬಹುಮಾನ ಘೋಷಣೆಯಾಗುತ್ತಿದೆ. ಚಾನು ಅವರಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಘೋಷಣೆ ಮಾಡಿದ್ದಾರೆ.

49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆಯಾಗಿದೆ.

‘ಭಾರತದ ಹೆಮ್ಮೆ ಮೀರಾಬಾಯಿ ಚಾನು ಅವರಿಗೆ ಭಾರತೀಯ ರೈಲ್ವೆ ಅಭಿನಂದನೆ ಸಲ್ಲಿಸುತ್ತದೆ ಮತ್ತು ಅವರ ಸಾಧನೆಯನ್ನು ಗೌರವಿಸುತ್ತದೆ. ಇದರೊಂದಿಗೆ 2 ಕೋಟಿ ರೂಪಾಯಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡಲಾಗುವುದು. ಭಾರತಕ್ಕಾಗಿ ಹೀಗೆ ಗೆಲ್ಲುತ್ತಲೇ ಇರಬೇಕು’ ಎಂದು ಅಶ್ವಿನಿ ವೈಷ್ಣವ್‌ ಆಶಿಸಿದರು.

29 ವರ್ಷದ ಮೀರಾಬಾಯಿ ಒಟ್ಟು 202 ಕೆ.ಜಿ (87 ಕೆ.ಜಿ. ಹಾಗೂ 115 ಕೆ.ಜಿ.) ಭಾರ ಎತ್ತುವ ಮೂಲಕ ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿದರು.

Sampriya YK

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

13 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

33 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

40 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

47 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago