ನವದೆಹಲಿ: ವೇಟ್ಲಿಫ್ಟರ್ ಮೀರಾಬಾಯಿ ಚಾನು ಮುಂಬರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ನೀಡಲು ಆಯೋಜಕರು ನಿರಾಕರಿಸಿದ್ದಾರೆ.
ಅದರಿಂದಾಗಿ ಮೀರಾ, 49 ಕೆಜಿ ವಿಭಾಗದಲ್ಲಿ ಸ್ಪರ್ಧಿಸಬೇಕಿದೆ.ಮೀರಾಬಾಯಿ ಅವರನ್ನು 55 ಕೆಜಿ, ಜಿಲಿ ದಲಬೆಹೆರಾ (49 ಕೆಜಿ) ಮತ್ತು ಎಸ್. ಬಿಂದ್ಯಾರಾಣಿ ದೇವಿ (59ಕೆಜಿ) ಅವರನ್ನು ಕಣಕ್ಕಿಳಿಸಲು ಭಾರತ ವೇಟ್ಲಿಫ್ಟಿಂಗ್ ಫೆಡರೇಷನ್ (ಐಡಬ್ಲ್ಯುಎಲ್ಎಫ್) ಯೋಜಿಸಿತ್ತು. ಇದರಿಂದಾಗಿ ಭಾರತಕ್ಕೆ ವೆಟ್ಲಿಫ್ಟಿಂಗ್ನಲ್ಲಿ ಪದಕಗಳನ್ನು ಜಯಿಸುವ ಅವಕಾಶಗಳು ಹೆಚ್ಚುತ್ತಿದ್ದವು.
ಬರ್ಮಿಂಗ್ಹ್ಯಾಮ್ನಲ್ಲಿ ಜುಲೈ 28 ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಕಾಮನ್ವೆಲ್ತ್ ಕೂಟದಲ್ಲಿ 64 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ ಪಾಪ್ಪಿ ಹಜಾರಿಕಾ ಸ್ಪರ್ಧಿಸುವರು.
ಮೀರಾಬಾಯಿ ಹೋದ ವರ್ಷ ಟೋಕಿಯೊ ಒಲಿಂಪಿಕ್ಸ್ನಲ್ಲಿ 49 ಕೆಜಿ ವಿಭಾಗದಲ್ಲಿಯೇ ಬೆಳ್ಳಿ ಪದಕ ಜಯಿಸಿದ್ದರು.
‘ಮೀರಾ ಮನವಿಯನ್ನು ತಳ್ಳಿ ಹಾಕಿರುವುದರಿಂದ ಯಾವುದೇ ನಷ್ಟವಿಲ್ಲ. ಅವರ ಪದಕ ಜಯದ ಅವಕಾಶ ಈಗಲೂ ಇದೆ. ಆದ್ದರಿಂದ ನಿರಾಶರಾಗಬೇಕಿಲ್ಲ’ ಎಂದು ಅವರ ಕೋಚ್ ವಿಜಯ್ ಶರ್ಮಾ ತಿಳಿಸಿದ್ದಾರೆ.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.