ಬೆಂಗಳೂರು: ಕಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಖ್ಯಾತ ಬೌಲರ್ ವೆಂಕಟೇಶ್ ಪ್ರಸಾದ್ ರಾಜೀನಾಮೆ ನೀಡಿದ್ದಾರೆ. ಅಂಡರ್-19 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇವರ ಪಾತ್ರ ಮಹತ್ವದಾಗಿತ್ತು. ಅದಲ್ಲದೆ ಇವರು ಕಳೆದ 30ತಿಂಗಳಿನಿಂದ ಬಿಸಿಸಿಐನ ಕಿರಿಯರ ಆಯ್ಕೆ ಸಮಿತಿಯಲ್ಲಿ ಒಬ್ಬರಾಗಿದ್ದರು.
ವೆಂಕಟೇಶ್ ಪ್ರಸಾದ್ ಅವರು ಬಿಸಿಸಿಐ ಜೊತೆಗಿನ ಶೀತಲ ಸಮರದ ಹಿನ್ನೆಲೆಯಲ್ಲಿ ತನ್ನ ಅಧ್ಯಕ್ಷ ಸ್ಥಾನಲ್ಲೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ವೆಂಕಟೇಶ್ ಅವರು ಐಪಿಎಲ್ ತಂಡವೊಂದಕ್ಕೆ ಕೋಚ್ ಆಗುತ್ತಾರೆಂಬ ಸುದ್ದಿಗಳು ಕೆಲ ದಿನಗಳಿಂದ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ.