ಮುಂಬೈ: ಗಾಯದ ಸಮಸ್ಯೆ ಎದುರಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ರವೀಂದ್ರ ಜಡೇಜ ಐಪಿಎಲ್ 2022 ಟೂರ್ನಿಯ ಉಳಿದಿರುವ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಇದರೊಂದಿಗೆ ಚೆನ್ನೈ ಪ್ಲೇ-ಆಫ್ ಪ್ರವೇಶದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.
ಮೇ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದ ವೇಳೆ ಕ್ಯಾಚ್ ಪಡೆಯಲು ವಿಫಲ ಯತ್ನ ನಡೆಸಿದಾಗ ಜಡೇಜ ಗಾಯಗೊಂಡಿದ್ದರು.ಕಳೆದ ಪಂದ್ಯದಲ್ಲೂ ಜಡೇಜ ಆಡಿರಲಿಲ್ಲ.
ಟೂರ್ನಿ ಆರಂಭಕ್ಕೂ ಮುನ್ನ ಜಡೇಜ ಅವರಿಗೆ ಮಹೇಂದ್ರ ಸಿಂಗ್ ಧೋನಿ, ನಾಯಕ ಸ್ಥಾನ ಹಸ್ತಾಂತರಿಸಿದ್ದರು. ಆದರೆ ತಂಡದ ಕಳಪೆ ನಿರ್ವಹಣೆಯ ಹಿನ್ನೆಲೆಯಲ್ಲಿ ಟೂರ್ನಿ ಮಧ್ಯೆ ಮತ್ತೆ ಧೋನಿಗೆ ನಾಯಕ ಪಟ್ಟ ಹಸ್ತಾಂತರಿಸಿದ್ದರು.
ಇದುವರೆಗೆ 11 ಪಂದ್ಯಗಳನ್ನು ಆಡಿರುವ ಚೆನ್ನೈ, ನಾಲ್ಕು ಗೆಲುವಿನೊಂದಿಗೆ ಒಟ್ಟು ಎಂಟು ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.
📢 Official Announcement:
Jadeja will be missing the rest of the IPL due to injury. Wishing our Jaadugar a speedy recovery! @imjadeja
— Chennai Super Kings (@ChennaiIPL) May 11, 2022