ಬೆಂಗಳೂರು: ಶ್ರೀಲಂಕಾ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಮಿಂಚಿದ್ದಾರೆ.
ಭಾನುವಾರ ಎರಡನೇ ದಿನದಾಟ ಆರಂಭಿಸಿದ ಶ್ರೀಲಂಕಾ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ 35.5 ಓವರ್ಗಳಲ್ಲಿ 109 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 145 ರನ್ಗಳ ಮಹತ್ವದ ಮುನ್ನಡೆ ಗಳಿಸಿದೆ.ಭಾರತದ ಪರ ಜಸ್ಪ್ರೀತ್ ಬೂಮ್ರಾ 5, ಆರ್. ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ 5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10 ರನ್ ಗಳಿಸಿದೆ. ಮಯಂಕ್ ಅಗರವಾಲ್, ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.
ಭಾರತ ಶನಿವಾರ ಮೊದಲ ಇನ್ನಿಂಗ್ಸ್ನಲ್ಲಿ 59.1 ಓವರ್ಗಳಲ್ಲಿ 252 ರನ್ ಗಳಿಸಿ ಆಲೌಟ್ ಆಗಿತ್ತು. ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.
253 ರನ್ ಗುರಿ ಬೆನ್ನತ್ತಿದ್ದ ಶ್ರೀಲಂಕಾ ಮೊದಲ ದಿನದಾಟದ ಅಂತ್ಯಕ್ಕೆ 6 ನಷ್ಟಕ್ಕೆ 86 ರನ್ ಗಳಿಸಿತ್ತು.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…