ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಅಂದ್ರೆ ಶನಿವಾರ ಪತ್ರಿಕಾಗೋಷ್ಠಿ ನಡೆಸಿದರು. ನಮ್ಮ ಸಂಪೂರ್ಣ ಗಮನ ಪಂದ್ಯದ ಮೇಲಿದೆ ಎಂದ ಕೊಹ್ಲಿ, ನಾವು ನಮ್ಮ ಅತ್ಯುತ್ತಮ ಆಟ ಪ್ರದರ್ಶಿಸ್ತೇವೆ ಎಂದರು. ಅದ್ರಂತೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಅಕ್ಟೋಬರ್ 24 ರಂದು ರಾತ್ರಿ 7.30 ಕ್ಕೆ ಪಂದ್ಯ ನಡೆಯಲಿದೆ. ಇನ್ನು ಭಾರತ ತಂಡದಲ್ಲಿ ಆಡುವ 11 ಆಟಗಾರರ ಬಗ್ಗೆ ಕೊಹ್ಲಿ ಬಳಿ ಪ್ರಶ್ನೆಸಿದಾಗ ಅವ್ರು ಪಂದ್ಯದ ಸಮಯದಲ್ಲಿ ಹೇಳುತ್ತೇವೆ, ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ ಎಂದರು.
ಪಾಕಿಸ್ತಾನ ಬಲಿಷ್ಠ ತಂಡ..!
ನಾವು ಯಾವತ್ತೂ ದಾಖಲೆಗಳ ಬಗ್ಗೆ ಮಾತನಾಡುವುದಿಲ್ಲ ಎಂದ ವಿರಾಟ್ ಕೊಹ್ಲಿ, ಹಿಂದೆ ಏನಾಗಿದೆ ಎಂಬುದರ ಬಗ್ಗೆ ಗಮನ ಹರಿಸಿಲ್ಲ. ಪಂದ್ಯದ ದಿನದಂದು ನೀವು ಹೇಗೆ ಆಡುತ್ತೀರಿ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತದೆ. ಪಾಕಿಸ್ತಾನದ ತಂಡವು ಅತ್ಯಂತ ಬಲಿಷ್ಠ ತಂಡವಾಗಿದೆ, ಅವರ ವಿರುದ್ಧ ನೀವು ಅತ್ಯುತ್ತಮವಾಗಿ ಆಡಬೇಕು. ಪಾಕಿಸ್ತಾನವು ಆಟವನ್ನ ತಿರುಗಿಸುವ ಆಟಗಾರರನ್ನು ಹೊಂದಿದೆ, ನಾವು ನಮ್ಮ ಯೋಜನೆಯ ಮೇಲೆ ಗಮನ ಹರಿಸಬೇಕು ಎಂದರು.
ಟಿ 20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ತಂಡ..!
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ-ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಡಬ್ಲ್ಯುಕೆ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ
ಮೀಸಲು ಆಟಗಾರರು: ಶ್ರೇಯರ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…
ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.
ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು…
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…