ಧರ್ಮಶಾಲಾ: ಸುರಂಗ ಲಕ್ಮಲ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದ ಟೀಂ ಇಂಡಿಯಾ ಬ್ಯಾಟ್ಸ್ ಮೆನ್ ಗಳು ಕೇವಲ 112 ರನ್ ಗಳಿಗೆ ಗಂಟುಮೂಟೆ ಕಟ್ಟಿದ್ದು, ಶ್ರೀಲಂಕಾ ಮೊದಲ ಏಕದಿನ ಪಂದ್ಯವನ್ನು ಏಳು ವಿಕೆಟ್ ಗಳಿಂದ ಗೆದ್ದುಕೊಂಡಿದೆ.
ಇಲ್ಲಿ ನಡೆದ ಮೊದಲ ಏಕದಿನದಲ್ಲಿ ಆರಂಭದಲ್ಲೇ ಕುಸಿತಕ್ಕೆ ಒಳಗಾದ ಟೀಂ ಇಂಡಿಯಾ, ಎಂ.ಎಸ್. ಧೋನಿ 65 ರನ್ ನೆರವಿನಿಂದ ನೂರರ ಗಡಿದಾಟಿ ಲಂಕಾಗೆ 113 ರನ್ ಸವಾಲನ್ನಿಟ್ಟಿತ್ತು. ಇದಕ್ಕೆ ಉತ್ತರಿಸಿದ ಲಂಕಾ ಮೂರು ವಿಕೆಟ್ ಕಳಕೊಂಡು 20.4 ಓವರ್ ಗಳಲ್ಲಿ 114 ರನ್ ಮಾಡಿ ಗೆಲುವು ತನ್ನದಾಗಿಸಿಕೊಂಡಿತು. ಉಪುಲ್ ತರಂಗ 49 ಮತ್ತು ನಿರೊಶನ್ ಡಿಕ್ವೆಲ್26, ಆ್ಯಂಜಲೋ ಮ್ಯಾಥ್ಯೂಸ್ 25 ರನ್ ಬಾರಿಸಿದರು.
ಕಪ್ತಾನ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಡಿದ ಟೀಂ ಇಂಡಿಯಾ ಆರಂಭದಲ್ಲೇ ಕುಸಿತಕ್ಕೆ ಒಳಗಾದ ಬಳಿಕ ಚೇತರಿಸಿಕೊಳ್ಳಲೇ ಇಲ್ಲ. ಮಧ್ಯಮ ಸರದಿಯಲ್ಲಿ ಧೋನಿ 65 ರನ್ ಮಾಡಿ ತಂಡಕ್ಕೆ ಆಸರೆಯಾದರು. ಸುರಂಗ ಲಕ್ಮಲ್ 13 ರನ್ ನೀಡಿ ನಾಲ್ಕು ಮತ್ತು ನುವಾನ್ ಪ್ರದೀಪ್ 37 ರನ್ ನೀಡಿ 2 ವಿಕೆಟ್ ಕಬಳಿಸಿದರು.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…