ಧರ್ಮಶಾಲಾ : ಶ್ರೀಲಂಕಾ ವಿರುದ್ಧದ ಎರಡನೇ ಟಿ20ಯಲ್ಲಿ ಬ್ಯಾಟಿಂಗ್ ಮಾಡುವಾಗ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ತೆಲೆಗೆ ಗಾಯವಾಗಿದ್ದು, ಆಸ್ಪತ್ರೆ ಸೇರಿದ್ದರು. ಸಧ್ಯ ಇಶಾನ್ ಕಿಶನ್ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಲಹಿರು ಕುಮಾರ ಅವ್ರ ಎಸೆತದಲ್ಲಿ ಇಶಾನ್ ಕಿಶನ್ ಗಾಯಗೊಂಡಿದ್ದು, 90 ಎಂಪಿಎಚ್ ವೇಗದಲ್ಲಿ ಬರುತ್ತಿದ್ದ ಬೌನ್ಸರ್ ಚೆಂಡು, ಇಶಾನ್ ಅವ್ರ ತಲೆಗೆ ತಗುಲಿತು. ಇದರ ನಂತರ, ಫಿಸಿಯೋ ಮೈದಾನಕ್ಕೆ ಬರಬೇಕಾಯಿತು. ಆದಾಗ್ಯೂ ತನಿಖೆಯ ನಂತ್ರ ಇಶಾನ್ ಕಿಶನ್ ಉತ್ತಮವಾಗಿದ್ದು,ಬ್ಯಾಟಿಂಗ್ ಪ್ರಾರಂಭಿಸಿದರು. ಆದ್ರೆ, ಅವರು ಆರನೇ ಓವರ್ʼನ ಮೊದಲ ಎಸೆತದಲ್ಲಿ ತಮ್ಮ ವಿಕೆಟ್ ಕಳೆದುಕೊಂಡರು. ಈ ವೇಳೆ ಅವರು 16 ರನ್ ಗಳಿಸಿದ್ದರು. ಆದಾಗ್ಯೂ, ಇಶಾನ್ ಅವರನ್ನ ನಂತರ ಕಾಂಗ್ರಾದ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಿಟಿ ಸ್ಕ್ಯಾನ್ ನಡೆಸಿದ ನಂತ್ರ ಅವರನ್ನ ಜನರಲ್ ವಾರ್ಡ್ʼಗೆ ಸ್ಥಳಾಂತರಿಸಲಾಯಿತು ಮತ್ತು ಅವ್ರು ವೈದ್ಯರ ಮೇಲ್ವಿಚಾರಣೆಯಲ್ಲಿ ತಮ್ಮ ರಾತ್ರಿಯನ್ನ ಕಳೆದಿದ್ದು, ಸಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…