ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.
ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ ನಂತರ ತಮ್ಮ ನೇರವಾದ ಟೀಕೆಗಳು ಹಾಗೂ ಮಾತುಗಳಿಂದ ಸಾಕಷ್ಟು ವಿವಾದ ಹಾಗೂ ಚರ್ಚೆಗಳಿಗೆ ಒಳಗಾಗುತ್ತಿದ್ದ ವಿನೋದ್ ಕಾಂಬ್ಳೆ ಕ್ರಿಕೆಟ್ ಹೊರತುಪಡಿಸಿ ಬೇರೆ ವಿಷಯಗಳಿಂದಲೂ ಕೂಡ ಸಾಕಷ್ಟು ಸುದ್ದಿಗಳಿಗೆ ಈಡಾಗಿದ್ದರು. ಇತ್ತೀಚೆಗಷ್ಟೇ ತಮ್ಮ ಖಾತೆಯಿಂದ 1 ಲಕ್ಷ ರೂಪಾಯಿಗಳು ಕಳುವಾಗಿದೆ ಎಂದು ಸೈಬರ್ ಕ್ರೈಂಗೆ ದೂರು ದಾಖಲಿಸಿದ್ದ ವಿನೋದ್ ಕಾಂಬ್ಳೆ ಇದೀಗ ತಾವೇ ಪೊಲೀಸರ ಅತಿಥಿಯಾಗಿದ್ದಾರೆ.
ಫೆಬ್ರವರಿ 27 ರ ಭಾನುವಾರ ಮಧ್ಯಾಹ್ನ ಕಾಂಬ್ಳಿಯನ್ನು ಬಾಂದ್ರಾದ ಅವರ ಮನೆಯಿಂದ ಬಂಧಿಸಲಾಗಿದೆ. ಕಾಂಬ್ಳಿ ಅವರು ಮದ್ಯದ ಅಮಲಿನಲ್ಲಿ ಬಾಂದ್ರಾದ ತಮ್ಮ ರೆಸಿಡೆನ್ಶಿಯಲ್ ಸೊಸೈಟಿಯ ಗೇಟ್ನಲ್ಲಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಇದಾದ ಬಳಿಕ ಅಲ್ಲಿದ್ದ ಸೊಸೈಟಿಯ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ರು. ಹೀಗಾಗಿ ಸ್ಥಳೀಯರು ಪೊಲೀಸರಿಗೆ ದೂರು ನೀಡಿ ನಂತರ ಬಂಧಿಸಲಾಗಿತ್ತು. ವಸತಿ ಸಮುಚ್ಚಯದವರು ನೀಡಿದ ದೂರಿನ ಆಧಾರದಲ್ಲಿ ಕಾಂಬ್ಳಿ ಅವರ ಮೇಲೆ ವಿನೋದ್ ಕಾಂಬ್ಳಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 279 (ವೇಗ ಚಾಲನೆ), 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯ) ಮತ್ತು 427 (ಹಾನಿ ಉಂಟುಮಾಡುವ) ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಬಂಧನದ ನಂತರ ಕಾಂಬ್ಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮುಂಬೈ ಪೊಲೀಸರು, ವಿನೋದ್ ಕಾಂಬ್ಳಿ ಅವರನ್ನು ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅವರ ವೈದ್ಯಕೀಯ ಪರೀಕ್ಷೆಯನ್ನು ಭಾಭಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ ಮತ್ತು ಅವರ ರಕ್ತದ ಮಾದರಿಯನ್ನು ಸಿಎಗೆ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ವಿನೋದ್ ಕಾಂಬ್ಳಿ 1990 ರ ದಶಕದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು ಮತ್ತು ದೀರ್ಘಕಾಲದವರೆಗೆ ತಂಡದ ಭಾಗವಾಗಿದ್ದರು. ODIಗಳಲ್ಲಿ 32.59 ಸರಾಸರಿ ಹೊಂದಿರುವ ವಿನೋದ್ ಕಾಂಬ್ಳಿ, ಭಾರತಕ್ಕಾಗಿ 17 ಟೆಸ್ಟ್ಗಳಲ್ಲಿ 54.2 ರ ಸರಾಸರಿಯಲ್ಲಿ 1,084 ರನ್ ಗಳಿಸಿದ್ದಾರೆ.
ಅವರು 104 ODIಗಳಲ್ಲಿ 32.59 ಸರಾಸರಿಯಲ್ಲಿ 2,477 ರನ್ ಗಳಿಸಿದರು. ಮಾಜಿ ಕ್ರಿಕೆಟ್ ಆಟಗಾರರಾಗಿರುವ ವಿನೋದ್ ಕಾಂಬ್ಳಿ ಸಚಿನ್ ತೆಂಡೊಲ್ಕರ್ ಜೊತೆಗೆ ಶಾಲಾ ಕ್ರಿಕೆಟ್ನಲ್ಲಿ 664 ರನ್ಗಳ ಜೊತೆಯಾಟ ಆಡಿ ಪ್ರಸಿದ್ಧಿ ಹೊಂದಿದ್ದರು, ಆದರೆ ಅವರು ತಮ್ಮ ನಿರೀಕ್ಷಿತ ಸಾಧನೆಯ ಮಟ್ಟವನ್ನು ತಲುಪಲಿಲ್ಲ.