Categories: ಕ್ರೀಡೆ

ಟೆಸ್ಟ್ ಸರಣಿ: ಎರಡನೇ ಪಂದ್ಯದಲ್ಲಿ ಭಾರತಕ್ಕೆ ಸೋಲು, ರಿಷಭ್ ಆಟದ ವೈಖರಿಗೆ ಟೀಕೆ ವ್ಯಕ್ತ

ಜೋಹಾನ್ಸ್ ಬರ್ಗ್ : ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಜೋಹಾನ್ಸ್ ಬರ್ಗ್ ನ ವಾಂಡರರ್ಸ್ ಸ್ಟೇಡಿಯಂನಲ್ಲಿ ಭಾರತ ಮೊದಲ ಬಾರಿಗೆ ಸೋಲು ಕಂಡಿದೆ. ಈ ಪಂದ್ಯದಲ್ಲಿ ಭಾರತದ ರಿಷಭ್ ಪಂತ್ ಆಟದ ವೈಖರಿಗೆ ಟೀಕೆಗಳು ವ್ಯಕ್ತವಾಗಿದೆ.

ಪಂತ್ ಆಟದ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್, ನಾವು ಪಂತ್ ಜೊತೆಗೆ ಮಾತನಾಡಬೇಕಾದ ಅಗತ್ಯವಿದೆ ಎಂದಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಪಂತ್ ಆಕ್ರಮಣಕಾರಿಯಾಗಿ ಆಡಲು ಹೋಗಿ ಶೂನ್ಯ ಮೊತ್ತಕ್ಕೆ ಔಟಾಗಿದ್ದರು. “ರಿಷಭ್ ಒಬ್ಬ ಉತ್ತಮ ಆಟಗಾರ ಎಂದು ನಮಗೆ ತಿಳಿದಿದೆ. ಅವರು ನಿರ್ದಿಷ್ಟ ರೀತಿಯಲ್ಲಿ ಆಡುತ್ತಾರೆ ಅದು ಅವರಿಗೆ ಯಶಸ್ಸನ್ನು ತಂದುಕೊಟ್ಟಿದೆ. ಆದರೆ ಖಂಡಿತವಾಗಿಯೂ ನಾವು ಅವರೊಂದಿಗೆ ಒಂದು ಮಟ್ಟದ ಮಾತುಕತೆ ನಡೆಸುತ್ತೇವೆ. ರಿಷಭ್‌ಗೆ ಧನಾತ್ಮಕ ಅಥವಾ ಆಕ್ರಮಣಕಾರಿ ಆಟಗಾರರಾಗಬೇಡಿ ಎಂದು ಯಾರೂ ಹೇಳುವುದಿಲ್ಲ. ಆದರೆ ಯಾವ ಸಮಯದಲ್ಲಿ ಆಕ್ರಮಣಕಾರಿಯಾಗಿ ಆಡುತ್ತಾರೆ ಎನ್ನುವುದು ಕೂಡಾ ಮುಖ್ಯ ” ಎಂದು ದ್ರಾವಿಡ್ ಹೇಳಿದರು.

ದಕ್ಷಿಣ ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್ ಅಜೇಯ 96 ರನ್ ಗಳಿಸುವ ಮೂಲಕ ನಾಯಕನ ಆಟವಾಡಿದರು. ಈ ಮೂಲಕ ಆತಿಥೇಯರ7 ವಿಕೆಟ್‌ಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

ಈ ಬಗ್ಗೆ ಮಾತನಾಡಿದ ದ್ರಾವಿಡ್, “ಡೀನ್ ಎಲ್ಗರ್ ಚೆನ್ನಾಗಿ ಆಡಿದರು, ಅವರಿಗೆ ಕ್ರೆಡಿಟ್ ನೀಡಬೇಕಾಗಿದೆ. ಅವರು ಕ್ರೀಸ್ ಕಚ್ಚಿ ನಿಂತು ಕೆಲವು ಕಷ್ಟಕರ ಅವಧಿಗಳಲ್ಲಿ ಹೋರಾಟ ನಡೆಸಿ ಆಡಿದರು” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

Gayathri SG

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

12 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

32 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

39 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

46 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

59 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago