ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ದೆಹಲಿ ಡೇರ್ ಡೆವಿಲ್ಸ್ ವಿರುದ್ಧ 15 ರನ್ ಗಳ ಮೂಲಕ ಗೆಲುವು ದಾಖಲಿಸಿದೆ.
ದೆಹಲಿ ಪರ ಮಾರಿಸ್ 3 ವಿಕೆಟ್ ಪಡೆದರೆ, ಜಹೀರ್ ಖಾನ್ 2 ಮತ್ತು ಕುಮಿನ್ಸ್ ಮತ್ತು ನದೀಮ್ ತಲಾ 1 ವಿಕೆಟ್ ಪಡೆದರು. ಆರ್ ಸಿಬಿ ನೀಡಿದ 158 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದೆಹಲಿ ತಂಡಕ್ಕೆ ಉತ್ತಮ ಆರಂಭ ದೊರೆಯಿತಾದರೂ ಮಧ್ಯಮ ಕ್ರಮಾಂಕದ ಕಳಪೆ ಬ್ಯಾಟಿಂಗ್ ನಿಂದಾಗಿ ದೆಹಲಿ ತಂಡ ದಿಢೀರ್ ಕುಸಿಯಿತು. ಕೇವಲ 55 ರನ್ ಗಳಾಗುವಷ್ಟರಲ್ಲೇ ದೆಹಲಿ ತಂಡದ ಮೂರು ವಿಕೆಟ್ ಗಳು ಪತನವಾಗಿತ್ತು. ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ರಿಷಬ್ ಪಂತ್ (57 ರನ್) ಕೊಂಚ ಪ್ರತಿರೋಧ ಒಡ್ಡಿದರಾದರೂ ತಂಡವನ್ನು ಸೋಲಿನ ಸುಳಿಯಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ದೆಹಲಿ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನಷ್ಟೇ ಪೇರಿಸಲು ಶಕ್ತವಾಯಿತು. ಆ ಮೂಲಕ 15 ರನ್ ಗಳ ಅಂತರದಲ್ಲಿ ಸೋಲುಕಂಡಿತು.
ಬೆಂಗಳೂರು ತಂಡ ನೀಡಿದ್ದ 158 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ದೆಹಲಿ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳನ್ನಷ್ಟೇ ಪೇರಿಸಲು ಶಕ್ತವಾಯಿತು. ಆ ಮೂಲಕ 15 ರನ್ ಗಳ ಅಂತರದಲ್ಲಿ ಆರ್ ಸಿಬಿ ತಂಡ ದೆಹಲಿ ವಿರುದ್ಧ ಸರಣಿಯ ತನ್ನ ಮೊದಲ ಗೆಲುವು ದಾಖಲಿಸಿತು.