News Karnataka Kannada
Friday, May 17 2024
ಕ್ರೀಡೆ

ದೇವದತ್ತ್ ಮತ್ತೊಂದು ಅರ್ಧಶತಕ: ಆರ್ ಸಿಬಿ ಜಯಭೇರಿ

Photo Credit :

ದೇವದತ್ತ್ ಮತ್ತೊಂದು ಅರ್ಧಶತಕ: ಆರ್ ಸಿಬಿ ಜಯಭೇರಿ

ದುಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ನ ಬೌಲರ್ ಗಳ ಅದ್ಭುತವಾದ ಬೌಲಿಂಗ್ ದಾಳಿಯಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲುವು ದಾಖಲಿಸಿಕೊಂಡಿದೆ.

ರಾಜಸ್ಥಾನವನ್ನು ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಗೆ ಕಟ್ಟಿ ಹಾಕಿದ ಆರ್ ಸಿಬಿ ದೇವದತ್ತ್ ಪಡಿಕ್ಕಲ್ 63 ರನ್ ಮತ್ತು ನಾಯಕ ವಿರಾಟ್ ಕೊಹ್ಲಿ 72 ರನ್ ನಿಂದ ಎರಡು ವಿಕೆಟ್ ನಷ್ಟಕ್ಕೆ 158 ರನ್ ಮಾಡಿ ಗೆಲುವು ತನ್ನದಾಗಿಸಿಕೊಂಡಿತು.

ಪಡಿಕ್ಕಲ್ 45 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದರು. ಕೊಹ್ಲಿ 53 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿದರು. ಇದು ದೇವದತ್ತ್ ಮೂರನೇ ಅರ್ಧಶತಕವಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಆರ್ ಸಿಬಿ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿ ಮುಂದೆ ಕೇವಲ 154 ರನ್ ಮಾಡಲಷ್ಟೇ ಶಕ್ತವಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು