Categories: ಕ್ರೀಡೆ

ಧವನ್ ಪತ್ನಿ, ಮಕ್ಕಳನ್ನು ವಿಮಾನವೇರಲು ಬಿಡದ ಅಧಿಕಾರಿಗಳು!

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ಅವರ ಪತ್ನಿ ಹಾಗೂ ಮಕ್ಕಳನ್ನು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ಕೇಪ್ ಟೌನ್ ವಿಮಾನವೇರಲು ಬಿಡದಿರುವ ಘಟನೆ ನಡೆದಿದೆ.

ಧವನ್ ಪತ್ನಿ ಏಶಾ ಮತ್ತು ಮಕ್ಕಳ ಜನನ ಪ್ರಮಾಣ ಪತ್ರ ಮತ್ತು ಇತರ ಕೆಲವೊಂದು ದಾಖಲೆಗಳನ್ನು ದುಬೈಯಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಕೇಳಿದರು. ಆದರೆ ಇದು ಶಿಖರ್ ಧವನ್ ಕುಟುಂಬದ ಬಳಿ ಇರಲಿಲ್ಲ. ಇದರಿಂದ ಕೇಪ್ ಟೌನ್ ಗೆ ತೆರಳುವ ವಿಮಾನವೇರದಂತೆ ಧವನ್ ಕುಟುಂಬವನ್ನು ತಡೆಹಿಡಿಯಲಾಯಿತು. ಗಂಟೆಗಟ್ಟಲೆ ಅವರು ದುಬೈ ವಿಮಾನ ನಿಲ್ದಾಣದಲ್ಲಿ ಕಾಯಬೇಕಾಯಿತು.

ದೆಹಲಿಯಿಂದ ದಾಖಲೆಗಳು ಬಂದ ಬಳಿಕ ಧವನ್ ಕುಟುಂಬಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಯಿತಾದರೂ ಹೋಗಬೇಕಾಗಿದ್ದ ವಿಮಾನ ಮಾತ್ರ ತಪ್ಪಿತ್ತು. ಇದರ ಬಗ್ಗೆ ಧವನ್ ಟ್ವಿಟ್ಟರ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ವೃತ್ತಿಪರವಲ್ಲದ ನಡವಳಿಕೆ. ನಾನು ದುಬೈ ಮೂಲಕ ಕೇಪ್ ಟೌನ್ ಗೆ ಹೋಗಬೇಕಾಗಿತ್ತು. ನನ್ನ ಕುಟುಂಬದವರ ಜನನ ಪ್ರಮಾಣ ಪತ್ರ ಮತ್ತು ಇತರ ದಾಖಲೆ ಕೇಳಿದರು. ಅದು ಆ ಕ್ಷಣದಲ್ಲಿ ನಮ್ಮ ಬಳಿ ಇರಲಿಲ್ಲ ಎಂದು ಅವರು ಮೊದಲ ಟ್ವೀಟ್ ನಲ್ಲಿ ಬರೆದಿದ್ದಾರೆ.

ಜ. 5ರಿಂದ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಮೂರು ಟೆಸ್ಟ್, ಆರು ಏಕದಿನ ಮತ್ತು ಮೂರು ಟಿ-20 ಪಂದ್ಯಗಳು ನಡೆಯಲಿದೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

38 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

56 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago