Categories: ಕ್ರೀಡೆ

ನೀರಜ್‌ ಒಲಿಂಪಿಕ್ಸ್‌ನಲ್ಲಿ ಬಂಗಾರಕ್ಕೆ ಮುತ್ತಿಟ್ಟ ಬಳಿಕ ದೇಶದೆಲ್ಲೆಡೆ ಜಾವೆಲಿನ್‌ ಥ್ರೋಗೆ ಹೆಚ್ಚಿದ ಬೇಡಿಕೆ

ನವದೆಹಲಿ : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್‌ ಚೋಪ್ರಾ ಜಾವೆಲಿನ್‌ ಎಸೆತದಲ್ಲಿ ಐತಿಹಾಸಿಕ ಚಿನ್ನ ಜಯಿಸಿದ ಬಳಿಕ, ದೇಶದೆಲ್ಲೆಡೆ ಯುವ ಕ್ರೀಡಾಳುಗಳಲ್ಲಿ ಜಾವೆಲಿನ್‌ ಥ್ರೋ ಮೇಲಿನ ಆಸಕ್ತಿ ಹೆಚ್ಚಿದೆ. ಜೊತೆಗೆ ಕೋಚಿಂಗ್‌ ಸೆಂಟರ್‌, ತರಬೇತುದಾರರು, ಜಾವೆಲಿನ್‌ ತಯಾರಕರಿಗೂ ಬೇಡಿಕೆ ಹೆಚ್ಚಾಗಿದೆ.

ಸಾಮಾನ್ಯವಾಗಿ ಭಾರತದಲ್ಲಿ ಕ್ರಿಕೆಟ್‌ ಮೇಲೆ ಮಕ್ಕಳಿಗೆ ಆಸಕ್ತಿ ಜಾಸ್ತಿ. ಆದರೆ ನೀರಜ್‌ ಒಲಿಂಪಿಕ್ಸ್‌ನಲ್ಲಿ ಬಂಗಾರಕ್ಕೆ ಮುತ್ತಿಟ್ಟ ಬಳಿಕ ಈ ಚಿತ್ರಣ ಬದಲಾಗಿದೆ. ಯುವ ಕ್ರೀಡಾಪಟುಗಳು ಜಾವೆಲಿನ್‌ ಥ್ರೋ  ತರಬೇತಿಯತ್ತ ಮುಖ ಮಾಡುತ್ತಿದ್ದಾರೆ. ದೇಶದ ಪ್ರಮುಖ ಕ್ರೀಡಾ ಅಕಾಡೆಮಿಗಳಲ್ಲಿ ಜಾವೆಲಿನ್‌ ಥ್ರೋ ಅಭ್ಯಾಸಕ್ಕಾಗಿ ಹೊಸ ದಾಖಲಾತಿಯಲ್ಲೂ ಏರಿಕೆಯಾಗಿದೆ. ಕುಸ್ತಿಗೆ ಹೆಸರುವಾಸಿಯಾಗಿರುವ ಡೆಲ್ಲಿಯ ಛತ್ರಸಾಲ್‌ ಸ್ಟೇಡಿಯಂನಲ್ಲಿ ಕಳೆದೆರಡು ತಿಂಗಳಲ್ಲಿ 40 ವಿದ್ಯಾರ್ಥಿಗಳು ಜಾವೆಲಿನ್‌ ಎಸೆತ ತರಬೇತಿಗಾಗಿ ಸೇರ್ಪಡೆಯಾಗಿದ್ದಾರೆ.

‘ನನ್ನ 12 ವರ್ಷದ ವೃತ್ತಿ ಬದುಕಿನಲ್ಲಿ ಈ ರೀತಿಯ ಆಸಕ್ತಿ ಕಂಡಿಲ್ಲ. ಒಲಿಂಪಿಕ್ಸ್‌ ಬಳಿಕ ಹಲವು ಮಂದಿ ನಾವಿನ್ನು ಜಾವೆಲಿನ್‌ ಆಡುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ವಿಚಾರಿಸಲು ಪ್ರತಿದಿನ ಹಲವಾರು ಕರೆಗಳು ಬರುತ್ತಿವೆ’ ಎಂದು ಕೋಚ್‌ ರಮನ್‌ ಜಾ ಹೇಳಿದ್ದಾರೆ. ರಾಷ್ಟ್ರೀಯ ಮಾಜಿ ಜಾವೆಲಿನ್‌ ಥ್ರೋ ಚಾಂಪಿಯನ್‌ ಸುನಿಲ್‌ ಗೋಸ್ವಾಮಿ, ‘ಜಾವೆಲಿನ್‌ ಮೇಲಿನ ಆಸಕ್ತಿ ರಾಷ್ಟ್ರ ರಾಜಧಾನಿಗೆ ಮಾತ್ರ ಸೀಮಿತವಾಗಿಲ್ಲ. ಟೆನಿಸ್‌, ಜಿಮ್ನಾಸ್ಟ್‌, ಓಟಗಾರರು ಇದೀಗ ಜಾವೆಲಿನ್‌ ಥ್ರೋ ತರಬೇತಿಗಾಗಿ ಬರುತ್ತಿದ್ದಾರೆ’ ಎಂದಿದ್ದಾರೆ.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

19 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

36 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

50 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago