Categories: ಕ್ರೀಡೆ

ಪಾಕ್ ವಿರುದ್ಧದ ಪಂದ್ಯದಲ್ಲಿ ದಾಖಲೆ ಬರೆದ ಮಿಥಾಲಿ ರಾಜ್

ಹೊಸದಿಲ್ಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ರವಿವಾರ ಮೌಂಟ್ ಮಂಗನೂಯಿಯ ಬೇ ಓವಲ್‍ನಲ್ಲಿ ಪಾಕಿಸ್ತಾನ ವಿರುದ್ಧ ಮಹಿಳಾ ವಿಶ್ವಕಪ್ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ವಿಶ್ವದಾಖಲೆ ಬರೆದರು.

ಈ ಹಿಂದೆ ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮಿಥಾಲಿ ರಾಜ್ ಸರಿಗಟ್ಟಿದರು.ರವಿವಾರ ಮೈದಾನಕ್ಕೆ ಇಳಿದ ಮಿಥಾಲಿ ರಾಜ್ ಆರು ಮಹಿಳಾ ವಿಶ್ವಕಪ್ ಟೂರ್ನಿಗಳಲ್ಲಿ ಭಾಗವಹಿಸಿದ ಮೊಟ್ಟಮೊದಲ ಕ್ರಿಕೆಟ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2000ನೇ ಇಸವಿಯ ವಿಶ್ವಕಪ್ ಮೂಲಕ ಪದಾರ್ಪಣೆ ಮಾಡಿದ ಅವರು, 2005, 2009, 2013, 2017 ಮತ್ತು 2022ನೇ ವಿಶ್ವಕಪ್‍ನಲ್ಲಿ ಭಾರತ ತಂಡದ ಪರ ಆಡಿದ ಸಾಧನೆ ಮಾಡಿದರು. ನ್ಯೂಝಿಲೆಂಡ್‍ನ ದೆಬ್ಬೀ ಹಾಕ್ಲೆ ಮತ್ತು ಇಂಗ್ಲೆಂಡ್‍ನ ಚಾರ್ಲೊಟ್ ಎಡ್ವಡ್ರ್ಸ್ ಅವರ ದಾಖಲೆಯನ್ನು ಮಿಥಾಲಿರಾಜ್ ರವಿವಾರ ಮುರಿದರು. ಏತನ್ಮಧ್ಯೆ ತಂಡದ ಸಹ ಆಟಗಾರ್ತಿ ಜೂಲನ್ ಗೋಸ್ವಾಮಿ, ಐದು ವಿಶ್ವಕಪ್ ಟೂರ್ನಿಗಳಲ್ಲಿ ಆಡುವ ಮೂಲಕ ಎರಡನೇ ಸ್ಥಾನಕ್ಕೇರಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಭಾರತ ಇತ್ತೀಚಿನ ವರದಿಗಳು ಬಂದಾಗ, ಭಾರತ 14 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ. ಸ್ಮೃತಿ ಮಂದಾನ 31 ಹಾಗೂ ದೀಪ್ತಿ ಶರ್ಮಾ ಕ್ರೀಸ್‍ನಲ್ಲಿದ್ದಾರೆ. ಭಾರತದ ಸ್ಕೋರ್ 4 ಆಗಿದ್ದಾಗ ಶಫಾಲಿ ವರ್ಮಾ (0) ಅವರ ವಿಕೆಟನ್ನು ಭಾರತ ಕಳೆದುಕೊಂಡಿತ್ತು.

Swathi MG

Recent Posts

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

23 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

38 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

1 hour ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

1 hour ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

2 hours ago