ಇಂದು ಶ್ರೀಲಂಕಾ ವಿರುದ್ಧ ಭಾರತ ಪಿಂಕ್ ಬಾಲ್ ಟೆಸ್ಟ್ ಆಡುತ್ತಿದ್ದು, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಹಗಲು ರಾತ್ರಿ ಈ ಪಿಂಕ್ ಬಾಲ್ ಪಂದ್ಯ ನಡೆಯಲಿದೆ.
ಇನ್ನು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಭಾರತ, ಅದ್ಭುತ ಪ್ರದರ್ಶನ ನೀಡಲು ಸಜ್ಜಾಗಿದೆ. ಎರಡೂ ತಂಡಗಳಲ್ಲಿ ಬದಲಾವಣೆಯಾಗಿದ್ದು, ಭಾರತದಿಂದ ಜಯಂತ್ ಯಾದವ್ ಬದಲಿಗೆ ಅಕ್ಷಯ್ ಪಟೇಲ್ ಸ್ಥಾನ ಪಡೆದುಕೊಂಡಿದ್ದಾರೆ.
ಶ್ರೀಲಂಕಾದಿಂದ ನಿಸ್ಸಾಂಕಾ ಮತ್ತು ಕುಮಾರ ಹೊರ ಹೋಗಿದ್ದು, ಕುಶಾಲ್ ಮೆಂಡೀಸ್ ಮತ್ತು ಪ್ರವೀಣ್ ಜಯವಿಕ್ರಮ ಸ್ಥಾನ ಪಡೆದುಕೊಂಡಿದ್ದಾರೆ.
ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಭಾರತದ ಪರವಾಗಿ ಆಡುತ್ತಿದ್ದಾರೆ.