ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.12ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿಯು ಗುರುವಾರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.
ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದೆ. ಇದು ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿದ್ದು, ಮಧ್ಯಾಹ್ನ ಆರಂಭವಾಗಲಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನಡೆಯುತ್ತಿದೆ.
ಹೆಚ್ಚಿನ ಸಂಖ್ಯೆಯ ಬೇಡಿಕೆಗಳನ್ನು ಪರಿಗಣಿಸಿ ಮತ್ತು ಪ್ರೇಕ್ಷಕರಿಗೆ ಹೆಚ್ಚಿನ ನಿರ್ಬಂಧಗಳಿಲ್ಲದ ಕಾರಣ, ಕೆಎಸ್ಸಿಎ ಕ್ರೀಡಾಂಗಣದ ಪೂರ್ಣ ಸಾಮರ್ಥ್ಯಕ್ಕಾಗಿ ಟಿಕೆಟ್ ಗಳ ಮಾರಾಟವನ್ನು ತೆರೆಯುತ್ತದೆ ಎಂದು ಕೆಎಸ್ಸಿಎ ಖಜಾಂಚಿ ವಿನಯ್ ಮೃತ್ಯುಂಜಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೊದಲ ಟೆಸ್ಟ್ ಪಂದ್ಯವು ಮೊಹಾಲಿಯಲ್ಲಿ ನಡೆದಿತ್ತು. ಈ ಪಂದ್ಯವನ್ನು ಭಾರತ ತಂಡ ಇನ್ನಿಂಗ್ ಮತ್ತು 222 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತ್ತು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…