ಟೋಕಿಯೊ: ನೋಯ್ಡಾದ ಜಿಲ್ಲಾಧಿಕಾರಿಯಾಗಿರುವ ಸುಹಾಸ್ ಯತಿರಾಜ್ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್4 ವಿಭಾಗದಲ್ಲಿ ಫೈನಲ್ಗೆ ಪ್ರವೇಶಿಸಿದ್ದಾರೆ.
ಪುರುಷರ ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು.
ಸುಹಾಸ್ ಯತಿರಾಜ್ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಮೊದಲ ಐಎಎಸ್ ಅಧಿಕಾರಿ ಎನಿಸಿದ್ದಾರೆ.
ಈ ಮೊದಲು ಬ್ಯಾಡ್ಮಿಂಟನ್ ಪುರುಷರ ಎಸ್ಎಲ್3 ವಿಭಾಗದಲ್ಲಿ ಭಾರತದ ಪ್ರಮೋದ್ ಭಗತ್ ಫೈನಲ್ಗೆ ಪ್ರವೇಶಿಸಿದ್ದಾರೆ.