Categories: ಕ್ರೀಡೆ

ಬಾಂಗ್ಲಾ ವಿರುದ್ಧ ಶ್ರಿಲಂಕಾ ತಂಡ ಭರ್ಜರಿ ಜಯ

ಶ್ರಿಲಂಕಾ ತಂಡವು ಬಾಂಗ್ಲಾ ವಿರುದ್ಧ ಭರ್ಜರಿ ಜಯಗಳಿಸಿದೆ. ಬಾಂಗ್ಲಾ ನೀಡಿದ್ದ 172 ರನ್​ಗಳ ಗುರಿ ಬೆನ್ನತ್ತಿದ್ದ, ಲಂಕಾ ತಂಡ 18.5 ಓವರ್​ಗಳಲ್ಲಿ ಗುರಿ ಮುಟ್ಟಿದೆ.

ಲಂಕಾ ಪರ ಓಪನರ್​ ಆಗಿ ಕಣಕ್ಕಿಳಿದ ಕುಸಾಲ್ ಪೆರೇರಾ ಹಾಗೂ ಪಾತುಮ್ ನಿಸಾಂಕ ಉತ್ತಮ ರನ್ ಕಲೆಹಾಕುವಲ್ಲಿ ಎಡವಿದರು. ಕುಸಾಲ್ ಪೆರೇರಾ ಕೇವಲ ಒಂದು ರನ್​ಗಳಿಸಿ ನಸುಮ್ ಅಹ್ಮದ್​ಗೆ ವಿಕೆಟ್​ ಒಪ್ಪಿಸಿದರು.

ನಂತರ ಕೂಡಿದ ಚರಿತ್ ಅಸಲಂಕ, ಪಾತುಮ್ ನಿಸಾಂಕ ಜೊಡಿ 70 ರನ್​ಗಳ ಜೊತೆಯಾಟವಾಡಿ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು. ಆದರೆ 24ರನ್​​ಗಳಿಸಿದ್ದಾಗ ಪಾತುಮ್ ನಿಸಾಂಕ ಶಕೀಬ್ ಅಲ್ ಹಸನ್ ವಿಕೆಟ್​ ಒಪ್ಪಿಸಿದರು.

ನಂತರ ಬಂದ ಆವಿಷ್ಕಾ ಫೆರ್ನಾಂಡೊ ಈ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೊಮ್ಮೆ ಪ್ಲಾಪ್​ ಆದರು. ನಂತರ ಕ್ರಿಸ್​ಗಿಳಿದ ಕಳೆದ ಪಂದ್ಯದ ಹೀರೋ ಹಸರಂಗ ಕೇವಲ 6 ರನ್​ಗೆ ತಮ್ಮ ಆಟವನ್ನ ಅಂತ್ಯಗೊಳಿಸಿದರು.

ನಂತರ ಚರಿತ್ ಅಸಲಂಕ ಜೊತೆಗೂಡಿದ ಭಾನುಕಾ ರಾಜಪಕ್ಷೆ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಚರಿತ್ ಅಸಲಂಕ ಅಜೆಯ 80 ರನ್​ಗಳಿಸಿದರೆ, ಭಾನುಕಾ ರಾಜಪಕ್ಷೆ 53 ರನ್​ಗಳಿಸುವ ಮೂಲಕ ಸೂಪರ್ 12 ಸುತ್ತಿನಲ್ಲಿ ಲಂಕಾಗೆ ಮೊದಲ ಜಯ ತಂದುಕೊಟ್ಟರು.

ಬಾಂಗ್ಲಾ ಪರ ಉತ್ತಮ ಬೌಲಿಂಗ್​ ಮಾಡಿದ ಶಕೀಬ್ ಅಲ್ ಹಸನ್ 2 , ಸೈಫುದ್ದೀನ್ 1, ನಸುಮ್ ಅಹ್ಮದ್ 2, ವಿಕೆಟ್​ ಪಡೆದು ಮಿಂಚಿದರು.

ಇದಕ್ಕೂ ಮುನ್ನ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​​ ಕಳೆದುಕೊಂಡು 171 ರನ್​ ಗಳಿಸಿದ್ದು, ಲಂಕಾ ತಂಡಕ್ಕೆ 172ರನ್​ಗಳ ಟಾರ್ಗೆಟ್​ ನೀಡಿತ್ತು.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago