ಫಿಲಿಫೈನ್ಸ್ನ ಮನಿಲಾದಲ್ಲಿ ನಡೆದ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ 2022 ರ ಮಹಿಳಾ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಹಾಲಿ ಚಾಪಿಯನ್ ಜಪಾನ್ನ ಅಕಾನೆ ಯಮಗುಚಿ ವಿರುದ್ಧ ಸೋಲು ಅನುಭವಿಸಿದ ಭಾರತದ ಸ್ಟಾರ್ ಷಟ್ಲರ್ ಪಿವಿ ಸಿಂಧು ಕಂಚಿನ ಪದಕಕ್ಕೆ ತೃಪ್ತಿಪಟ್ಟರು.
ಶನಿವಾರ ನಡೆದ ಸೆಮೀಸ್ ಪಂದ್ಯದಲ್ಲಿ ವಿಶ್ವದ ನಂ.2 ಆಟಗಾರ್ತಿ ಯಮಗುಚಿ ವಿರುದ್ಧ ಒಂದು ಗಂಟೆ ಆರು ನಿಮಿಷಗಳ ಹೋರಾಡಿದ ಸಿಂಧು 13-21, 21-19, 16-21 ಸೆಟ್ ಗಳಲ್ಲಿ ವೀರೋಚಿತ ಸೋಲು ಕಂಡರು. ಕಾಂಟಿನೆಂಟಲ್ ಈವೆಂಟ್ನಲ್ಲಿ ಸಿಂಧುಗೆ ಇದು ಎರಡನೇ ಕಂಚಿನ ಪದಕವಾಗಿದೆ.
ಸಿಂಧು ಹೆಚ್ಚಿನ ಸವಾಲಿಲ್ಲದೆ ಮೊದಲ ಸೆಟ್ ಅನ್ನು ಗೆದ್ದರು. ಎರಡನೇ ಸೆಟ್ ವಿರಾಮದ ವೇಳೆಗೆ ಸಿಂಧು 11-6ರಲ್ಲಿ ಮುನ್ನಡೆ ಸಾಧಿಸಿದರು. ಆದರೆ ಸಿಂಧು ಪಾಯಿಂಟ್ಗಳ ನಡುವೆ ಹೆಚ್ಚು ಸಮಯ ತೆಗೆದುಕೊಂಡಿದ್ದಕ್ಕಾಗಿ ಪಾಯಿಂಟ್ ಪೆನಾಲ್ಟಿ ನೀಡಲಾಯಿತು.
ಈ ವೇಳೆ ಕ್ರೀಡಾಂಗಣದಲ್ಲಿ ರೆಫರಿಯೊಂದಿಗಿನ ವಾಗ್ವಾದಕ್ಕೂ ಕಾರಣವಾಗಿತ್ತು. ಇದರಿಂದಾಗಿ ಸಿಂಧು ಹಿನ್ನೆಡೆ ಅನುಭವಿಸಿದರು. ಅಂತಿಮ ಗೇಮ್ನಲ್ಲಿ ಸಿಂಧು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಯಮಗುಚಿ ಐದು ಮ್ಯಾಚ್ ಪಾಯಿಂಟ್ ಅಂತರದಲ್ಲಿ ಪಂದ್ಯವನ್ನು ತಮ್ಮದಾಗಿಸಿಕೊಂಡರು. ಈ ಪಂದ್ಯದ ಸೋಲಿನ ಮೂಲಕ ಸಿಂಧು ಮತ್ತು ಯಮಗುಚಿ ನಡುವಿನ ಮುಖಾಮುಖಿಯು ಈಗ 13-9 ಆಗಿದೆ. ಸಿಂಧು ಸೋಲಿನಿಂದಾಗಿ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…