News Karnataka Kannada
Monday, April 29 2024
ಕ್ರೀಡೆ

ಭಾರತದ ಕ್ರಿಕೆಟ್ ಟೀಮ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್

Photo Credit :

ಭಾರತದ ಕ್ರಿಕೆಟ್ ಟೀಮ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್

ಅಹಮದಾಬಾದ್: ಭಾರತದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ಭಾರತದ ನಡುವಿನ ಸರಣಿ ಟಿ-ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೂರು ಪಂದ್ಯಗಳು ಮುಗಿದಿದ್ದು ಅದರಲ್ಲಿ ಇಂಗ್ಲೆಂಡ್ 2 ಹಾಗೂ ಭಾರತ ಒಂದು ಪಂದ್ಯವನ್ನು ಗೆದ್ದಿದೆ. ಇದೀಗ ಈ ಬಗ್ಗೆ ವ್ಯಂಗ್ಯವಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಗೆಲ್ಲಲು ಟಾಸ್ ಗೆದ್ದರೆ ಸಾಕು ಎಂದು ವ್ಯಂಗ್ಯವಾಡಿದ್ದಾರೆ.

ಮೂರು ಟಿ20 ಪಂದ್ಯಗಳಲ್ಲೂ ಟಾಸ್ ಗೆದ್ದರೆ ಪಂದ್ಯವನ್ನು ಗೆದ್ದಿದ್ದಾರೆ. ಭಾರತ ಒಂದು ಪಂದ್ಯ ಗೆದ್ದಿದ್ದರೆ ಇಂಗ್ಲೆಂಡ್ 2 ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಬಗ್ಗೆ ಮಾತನಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ತಮ್ಮ ಟ್ವೀಟ್ ಮೂಲಕ, ಇದೇ ವರ್ಷ ಭಾರತದಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಲಿದ್ದು, ತಂಡಗಳು ವಿಶ್ವಕಪ್ ಗೆಲ್ಲಲು ಟಾಸ್ ಗೆದ್ದರೆ ಸಾಕು ಎಂದು ಲೇವಡಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು