Categories: ಕ್ರೀಡೆ

ಭಾರತ- ಇಂಗ್ಲೆಂಡ್​ ನಡುವಿನ 5ನೇ ಟೆಸ್ಟ್​ ಪಂದ್ಯ ರದ್ದಾಗಲು ಕಾರಣವೇನು?

ಕ್ರಿಕೆಟ್ : ಭಾರತ ಹಾಗೂ ಇಂಗ್ಲೆಂಡ್​ ತಂಡಗಳ ನಡುವಿನ 5ನೇ ಟೆಸ್ಟ್​ ಪಂದ್ಯ ರದ್ದುಗೊಂಡಿದೆ. ಇದಕ್ಕೆ ಮುಖ್ಯ ಕಾರಣ ಏನು ಎಂಬುದರ ಬಗ್ಗೆ ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೌರವ್​ ಗಂಗೂಲಿ ಮಾಹಿತಿ ನೀಡಿದ್ದಾರೆ.

ಉಭಯ ತಂಡಗಳ ನಡುವೆ ಫೈನಲ್ ಟೆಸ್ಟ್​ ಪಂದ್ಯ ಆರಂಭಗೊಳ್ಳಲು ಕೇವಲ ಎರಡು ಗಂಟೆ ಬಾಕಿ ಇದ್ದಾಗ ಪಂದ್ಯ ರದ್ಧಾಗಿದೆ ಎಂದು ಘೋಷಿಸಿಲಾಗಿತ್ತು. ಈ ಬಗ್ಗೆ ಈಗಾಗಲೇ ಇಂಗ್ಲೆಂಡ್​ನ ಅನೇಕ ಮಾಜಿ ಕ್ರಿಕೆಟರ್ಸ್​​ ಗಂಭೀರ ಆರೋಪ ಮಾಡಿದ್ದು, ಐಪಿಎಲ್​ಗೋಸ್ಕರ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಟೀಂ ಇಂಡಿಯಾ ಕ್ಯಾಂಪ್​ನಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ನಮ್ಮ ಆಟಗಾರರು 5ನೇ ಟೆಸ್ಟ್​​ ಪಂದ್ಯ ಆಡಲು ನಿರಾಕರಿಸಿದ್ದರು. ಅದಕ್ಕೋಸ್ಕರ ನಾವು ಪ್ಲೇಯರ್ಸ್​ಗಳನ್ನು ದೂಷಿಸುವುದು ಸರಿಯಲ್ಲ. ಬಿಸಿಸಿಐ ಜವಾಬ್ದಾರಿಯುತ ಕ್ರಿಕೆಟ್ ಮಂಡಳಿಯಾಗಿದೆ. ನಾವು ಇತರೆ ಕ್ರಿಕೆಟ್ ಬೋರ್ಡ್​ಗಳಿಗೂ ಗೌರವ ನೀಡುತ್ತೇವೆ. ಕ್ರಿಕೆಟರ್ಸ್​ ಆರೋಗ್ಯ ದೃಷ್ಠಿಯಿಂದ ವಿಚಾರ ಮಾಡಿದಾಗ ಅವರು ನಡೆದುಕೊಂಡಿರುವುದು ಸರಿಯಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.

ಇನ್ನು ಉಭಯ ತಂಡಗಳ ಪಂದ್ಯ ರದ್ದತಿ ವಿಚಾರವಾಗಿ ಮಾತನಾಡಲು ಗಂಗೂಲಿ ಸೆಪ್ಟೆಂಬರ್​​​ 22ರಂದು ಇಂಗ್ಲೆಂಡ್​ಗೆ ಪ್ರಯಾಣ ಕೈಗೊಳ್ಳಲಿದ್ದು, ಮಹತ್ವದ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಎಲ್ಲ ಪ್ಲೇಯರ್ಸ್​ ದುಬೈಗೆ ಆಗಮಿಸಿದ್ದು, ಸೆಪ್ಟೆಂಬರ್​​ 19ರಿಂದ ಆರಂಭಗೊಳ್ಳಲಿರುವ ಇಂಡಿಯನ್​ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗಿಯಾಗಲಿದ್ದಾರೆ.

Sneha Gowda

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

33 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

38 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

50 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

53 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

1 hour ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago