ಬೀಜಿಂಗ್ : ಚಳಿಗಾಲದ ಒಲಿಂಪಿಕ್ ಕೂಟಕ್ಕೆ ಬೀಜಿಂಗ್ಗೆ ತೆರಳಿರುವ ಭಾರತ ತಂಡದ ಮ್ಯಾನೇಜರ್ ಮೊಹಮ್ಮದ್ ಅಬ್ಬಾಸ್ ವಾನಿ ಅವರಿಗೆ ಕೋವಿಡ್ ಖಚಿತಪಟ್ಟಿದೆ.
ಕಾಶ್ಮೀರದ ಸ್ಕೀಯಿಂಗ್ ಪಟು ಆರಿಫ್ ಖಾನ್ ಅವರು ಈ ಬಾರಿಯ ಚಳಿಗಾಲದ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲಿರುವ ಭಾರತದ ಏಕೈಕ ಅಥ್ಲೀಟ್ ಆಗಿದ್ದಾರೆ. ಅವರು ಸೇರಿ ಆರು ಮಂದಿಯ ತಂಡವು ಸೋಮವಾರ ರಾತ್ರಿ ಬೀಜಿಂಗ್ಗೆ ಪ್ರಯಾಣ ಬೆಳೆಸಿತ್ತು.
ಚೆಫ್ ಡಿ ಮಿಶನ್ ಹರ್ಜಿಂದರ್ ಸಿಂಗ್, ಕೋಚ್ ಲೂದರ್ ಚಂದ್ ಠಾಕೂರ್, ತಂತ್ರಜ್ಞ ಪೂರನ್ ಚಂದ್ ಮತ್ತು ಅಧಿಕಾರಿ ರೂಪ್ ಚಂದ್ ನೇಗಿ ಭಾರತ ತಂಡದಲ್ಲಿರುವ ಇನ್ನುಳಿದ ಸದಸ್ಯರು.
ಅಬ್ಬಾಸ್ ವಾನಿ ಅವರಿಗೆ ಕೋವಿಡ್ ದೃಢಪಟ್ಟಿದ್ದರ ಕುರಿತು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷ ನರಿಂದರ್ ಬಾತ್ರಾ ಮಾಹಿತಿ ನೀಡಿದ್ದಾರೆ. ವಾನಿ ಅವರ ಮರುಪರೀಕ್ಷೆಯ ಕುರಿತು ಚೆಫ್ ಡಿ ಮಿಷನ್ ಹರ್ಜಿಂದರ್ ಅವರು ಟೂರ್ನಿಯ ಆಯೋಜಕರೊಂದಿಗೆ ಚರ್ಚಿಸಿದ್ದಾರೆ’ ಎಂದು ಹೇಳಿದ್ದಾರೆ.
ಅಥ್ಲೀಟ್ ಅರಿಫ್ ಖಾನ್ ಮತ್ತು ಕೋಚ್ ಅವರನ್ನು ಬೇರೆ ಕೊಠಡಿಗೆ ತೆರಳಲು ಸೂಚಿಸಲಾಗಿದೆ ಎಂದು ಬಾತ್ರಾ ಹೇಳಿದ್ದಾರೆ. ಇದೇ 4ರಿಂದ 20ರವರೆಗೆ ಚಳಿಗಾಲದ ಒಲಿಂಪಿಕ್ಸ್ ನಡೆಯಲಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…