News Karnataka Kannada
Sunday, May 05 2024
ಕ್ರೀಡೆ

ಮತ್ತೆ ಪಿಚ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಘೋಷಿಸಿದ ಯುವರಾಜ್ ಸಿಂಗ್

Yuvaraj Singh
Photo Credit :

ದೆಹಲಿ : ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರು ಮತ್ತೆ ಪಿಚ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಮಂಗಳವಾರ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಜನರ ಬೇಡಿಕೆಯ ಮೇರೆಗೆ ನಾನು ಫೆಬ್ರುವರಿಯಲ್ಲಿ ಮತ್ತೆ ಪಿಚ್‌ಗೆ ಮರಳಲಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಕೋರಿಕೆಗೆ ಧನ್ಯವಾದಗಳು. ಭಾರತವನ್ನು ಬೆಂಬಲಿಸುತ್ತಿರಿ. ಇದು ನಮ್ಮ ತಂಡ. ನಿಜವಾದ ಅಭಿಮಾನಿಗಳು ಕಠಿಣ ಸಮಯದಲ್ಲೂ ಬೆಂಬಲವಾಗಿರುತ್ತಾರೆ,’ ಎಂದು ಅವರು ಬರೆದುಕೊಂಡಿದ್ದಾರೆ.

2011ರ ವಿಶ್ವಕಪ್‌ನಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಯುವರಾಜ್ 90.50ರ ಸರಾಸರಿಯಲ್ಲಿ 362 ರನ್ ಗಳಿಸಿದ್ದಲ್ಲದೇ, 15 ವಿಕೆಟ್‌ಗಳನ್ನೂ ಪಡೆದಿದ್ದರು. ಯುವರಾಜ್ 2011ರ ವಿಶ್ವಕಪ್‌ನಲ್ಲಿ ತಮ್ಮ ಕ್ರಿಕೆಟ್‌ ವೃತ್ತಿ ಜೀವನದ ಉತ್ತುಂಗದಲ್ಲಿದ್ದರಾದರೂ, ವಿಶ್ವಕಪ್‌ ಕೂಟ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಕ್ಯಾನ್ಸರ್‌ನಿಂದ ಬಳಲಿದರು.

ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಜಗತ್ತಿನ ಹಲವು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಯುವರಾಜ್‌ ಆಡಿದ್ದಾರೆ. ಜಿಟಿ 20 ಲೀಗ್‌ನಲ್ಲಿ ಟೊರೊಂಟೊ ನ್ಯಾಷನಲ್ಸ್ ಅನ್ನು ಪ್ರತಿನಿಧಿಸಿದ್ದಾರೆ. ಅಬುಧಾಬಿ ಟಿ10ನಲ್ಲಿ ಅವರು ಮರಾಠ ಅರೇಬಿಯನ್ಸ್‌ಗಾಗಿ ಆಡಿದ್ದಾರೆ.

ಯುವರಾಜ್ ಸಿಂಗ್ ಭಾರತಕ್ಕಾಗಿ ಅಥವಾ ಟಿ 20 ಲೀಗ್‌ಗಳಲ್ಲಿ ಆಡಲು ಮರಳುತ್ತಾರೆಯೇ ಎಂಬುದು ಇನ್ನೂ ಅಸ್ಪಷ್ಟವಾಗಿದ್ದರೂ, ಕ್ರಿಕೆಟ್ ಪಿಚ್‌ನಲ್ಲಿ ಸ್ಟಾರ್ ಬ್ಯಾಟರ್ ಅನ್ನು ಮತ್ತೊಮ್ಮೆ ಕಂಣ್ತುಬಿಕೊಳ್ಳಲು ಅಭಿಮಾನಿಗಳು ಕಾತರದಲ್ಲಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು