ಮುಂಬೈ : ಜೋಸ್ ಬಟ್ಲರ್ ಆರ್ಭಟದ ಬ್ಯಾಟಿಂಗ್ ಎದುರು ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ವೀರೋಚಿತ ಸೋಲನ್ನು ಅನುಭವಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಿಗದಿತ ಇಪ್ಪತ್ತು ಓವರ್ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು.ಈ ಬೃಹತ್ ಮೊತ್ತ ಬೆನ್ನಟ್ಟಿದ ಮುಂಬೈ ತಂಡದ ಗೆಲುವಿಗಾಗಿ ಕೀರಾನ್ ಪೋಲಾರ್ಡ್ 22 ರನ್ (24 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಹೋರಾಡಿದರು ಕೂಡ ಗೆಲುವು ದಕ್ಕಿಸಿಕೊಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಂಬೈ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 170 ರನ್ ಪೇರಿಸಿ 23 ರನ್ ಅಂತರದಿಂದ ರಾಜಸ್ಥಾನ ತಂಡಕ್ಕೆ ತಲೆ ಬಾಗಿತು.
ರಾಜಸ್ಥಾನ ತಂಡದ ಪರ ಯಶಸ್ವಿ ಜೈಸ್ವಾಲ್ 1 ಮತ್ತು ದೇವದತ್ ಪಡಿಕ್ಕಲ್ 7 ರನ್ ಸಿಡಿಸಿ ಔಟ್ ಆದರು. ಬಳಿಕ ಜೊತೆಯಾದ ಜೋಸ್ ಬಟ್ಲರ್ ಮತ್ತು ಸಂಜು ಸ್ಯಾಮ್ಸನ್ 3ನೇ ವಿಕೆಟ್ಗೆ 82 ರನ್ (50 ಎಸೆತ) ಜೊತೆಯಾಟವಾಡಿ ರಾಜಸ್ಥಾನ ತಂಡಕ್ಕೆ ನೆರವಾದರು. ಸಂಜು ಸ್ಯಾಮ್ಯನ್ 30 ರನ್ (21 ಎಸೆತ, 1 ಬೌಂಡರಿ, 3 ಸಿಕ್ಸ್) ಸಿಡಿಸಿ ಔಟ್ ಆದರು.
ಬಳಿಕ ಒಂದಾದ ಬಟ್ಲರ್ ಮತ್ತು ಶಿಮ್ರಾನ್ ಹೆಟ್ಮೆಯರ್ ಮುಂಬೈ ಆಟಗಾರರ ಬೆವರಿಸಿದರು, ಬಟ್ಲರ್ 100 ರನ್ (68 ಎಸೆತ) ಗಳಿಸಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ 15ನೇ ಆವೃತ್ತಿಯ ಮೊದಲ ಶತಕ ಸಿಡಿಸಿ ಮಿಂಚಿದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…