ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ನ ಮೂರನೇ ದಿನವಾದ ಇಂದು ಭಾರತ ರಬಾಡ ಮತ್ತು ಲುಂಗಿ ಎಂಗಿಡಿ ದಾಳಿಗೆ ಸಿಲುಕಿ 327ರನ್ಗಳಿಗೆ ಆಲೌಟ್ ಆಗಿದೆ.
ಮೊದಲ ದಿನ 3 ವಿಕೆಟ್ ಕಳೆದುಕೊಂಡು 272 ರನ್ಗಳಿಸಿದ್ದ ಭಾರತ, 2ನೇ ದಿನ ಮಳೆ ಕಾರಣ ಆಟವಾಡದೇ , 3ನೇ ದಿನ ಇಂದು ಬ್ಯಾಟಿಂಗ್ ಆರಂಭಿಸಿತ್ತು.
ಇಂದು ಭಾರತ ಕೇವಲ 55 ರನ್ ಗಳಿಸಿ 7 ವಿಕೆಟ್ ಕಳೆದುಕೊಂಡಿತು. ಮಂಗಳವಾರ 122 ರನ್ಗಳೊಂದಿಗೆ ಬ್ಯಾಟಿಂಗ್ ಆರಂಭಿಸಿದ ಕೆಎಲ್ ರಾಹುಲ್ ಒಂದು ರನ್ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ರಹಾನೆ 48 ರನ್ಗಳಿಸಿ ಎಂಗಿಡಿಗೆ ವಿಕೆಟ್ ಒಪ್ಪಿಸಿದರು.
ಇವರಿಬ್ಬರ ವಿಕೆಟ್ ಪತನದ ಬಳಿಕ ಭಾರತ ಸತತ 4 ಓವರ್ಗಳಲ್ಲಿ ಅಶ್ವಿನ್(4), ರಿಷಭ್ ಪಂತ್(8), ಶಾರ್ದೂಲ್ ಠಾಕೂರ್(4) ಮತ್ತು ಮೊಹಮ್ಮದ್ ಶಮಿ(8) ವಿಕೆಟ್ ಕಳೆದುಕೊಂಡಿತು. ಕೊನೆಯ ವಿಕೆಟ್ಗೆ ಜಸ್ಪ್ರೀತ್ ಬುಮ್ರಾ(14) ಮತ್ತು ಮೊಹಮ್ಮದ್ ಸಿರಾಜ್ (4) 19 ರನ್ ಗಳಿಸಿದರು.
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…