Categories: ಕ್ರೀಡೆ

ರಬಾಡ ಮತ್ತು ಲುಂಗಿ ಎಂಗಿಡಿ ದಾಳಿಗೆ ಸಿಲುಕಿ 327ರನ್​ಗಳಿಗೆ ಭಾರತ ಆಲೌಟ್

ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ನ ಮೂರನೇ ದಿನವಾದ ಇಂದು ಭಾರತ ರಬಾಡ ಮತ್ತು ಲುಂಗಿ ಎಂಗಿಡಿ ದಾಳಿಗೆ ಸಿಲುಕಿ 327ರನ್​ಗಳಿಗೆ ಆಲೌಟ್ ಆಗಿದೆ.

ಮೊದಲ ದಿನ 3 ವಿಕೆಟ್​ ಕಳೆದುಕೊಂಡು 272 ರನ್​ಗಳಿಸಿದ್ದ ಭಾರತ, 2ನೇ ದಿನ ಮಳೆ ಕಾರಣ ಆಟವಾಡದೇ , 3ನೇ ದಿನ ಇಂದು ಬ್ಯಾಟಿಂಗ್ ಆರಂಭಿಸಿತ್ತು.

ಇಂದು ಭಾರತ ಕೇವಲ 55 ರನ್​​ ಗಳಿಸಿ 7 ವಿಕೆಟ್ ಕಳೆದುಕೊಂಡಿತು. ಮಂಗಳವಾರ 122 ರನ್​ಗಳೊಂದಿಗೆ ಬ್ಯಾಟಿಂಗ್ ಆರಂಭಿಸಿದ ಕೆಎಲ್ ರಾಹುಲ್​ ಒಂದು ರನ್​ಗಳಿಸಿ ರಬಾಡಗೆ ವಿಕೆಟ್​​ ಒಪ್ಪಿಸಿದರು. ರಹಾನೆ 48 ರನ್​ಗಳಿಸಿ ಎಂಗಿಡಿಗೆ ವಿಕೆಟ್​ ಒಪ್ಪಿಸಿದರು.

ಇವರಿಬ್ಬರ ವಿಕೆಟ್ ಪತನದ ಬಳಿಕ ಭಾರತ ಸತತ 4 ಓವರ್​ಗಳಲ್ಲಿ ಅಶ್ವಿನ್​(4), ರಿಷಭ್ ಪಂತ್(8), ಶಾರ್ದೂಲ್ ಠಾಕೂರ್​(4) ಮತ್ತು ಮೊಹಮ್ಮದ್​ ಶಮಿ(8) ವಿಕೆಟ್​ ಕಳೆದುಕೊಂಡಿತು. ಕೊನೆಯ ವಿಕೆಟ್​ಗೆ ಜಸ್ಪ್ರೀತ್ ಬುಮ್ರಾ(14) ಮತ್ತು ಮೊಹಮ್ಮದ್ ಸಿರಾಜ್​ (4) 19 ರನ್​ ಗಳಿಸಿದರು.

Sneha Gowda

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

13 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

37 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

55 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago