Categories: ಕ್ರೀಡೆ

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ  ಚಿನ್ನ ಜಯಿಸಿದ ನಿಶಾ ದಹಿಯಾ

ಗೊಂಡಾ(ನ.12): ಬುಧವಾರವಷ್ಟೇ ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ಸುದ್ದಿಯಾಗಿದ್ದ ಅಂಡರ್‌-23 ವಿಶ್ವ ಚಾಂಪಿಯನ್‌ ಕಂಚು ವಿಜೇತೆ ನಿಶಾ ದಹಿಯಾ  ಗುರುವಾರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ  ಚಿನ್ನ ಜಯಿಸಿದ್ದಾರೆ.

ಮಹಿಳೆಯರ 65 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ನಿಶಾ, ಪಂಜಾಬ್‌ನ ಜಸ್‌ಪ್ರೀತ್‌ ಕೌರ್‌ರನ್ನು ಕೇವಲ 30 ಸೆಕೆಂಡ್‌ಗಳಲ್ಲಿ ಮಣಿಸಿ ಚಿನ್ನ ಗೆದ್ದುಕೊಂಡರು. ಇದರೊಂದಿಗೆ ನಿಶಾ ದಹಿಯಾ ಸತತ ಎರಡನೇ ಬಾರಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ನಿಶಾ, ‘ಹತ್ಯೆ ವದಂತಿ ಬಳಿಕ ನಾನು ತುಂಬಾ ಒತ್ತಡದಲ್ಲಿದೆ. ನಿದ್ರಿಸಲೂ ಸಾಧ್ಯವಾಗಲಿಲ್ಲ. ಆದರೆ ಚಾಂಪಿಯನ್‌ಶಿಪ್‌ ಅಭಿಯಾನ ಉತ್ತಮ ಹಾಗೂ ಸಂತೋಷದಿಂದ ಮುಕ್ತಾಯಗೊಂಡಿದೆ’ ಎಂದಿದ್ದಾರೆ.

ಸರ್ಬಿಯಾದ ಬೆಲ್ಗ್ರೇಡ್‌ನಲ್ಲಿ ನವೆಂಬರ್ 05ರಂದು ನಡೆದ ಅಂಡರ್‌-23 ವಿಶ್ವ ಚಾಂಪಿಯನ್‌ ಕ್ರೀಡಾಕೂಟದಲ್ಲಿ 72 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ನಿಶಾ ದಹಿಯಾ ಕಂಚಿನ ಪದಕ ಜಯಿಸಿದ್ದರು. ಇದರ ಬೆನ್ನಲ್ಲೇ ಅಂಡರ್‌-23 ವಿಶ್ವ ಚಾಂಪಿಯನ್‌ ಸ್ಪರ್ಧೆಯಲ್ಲಿ ಪಾಲ್ಗೊಂಡ ಕುಸ್ತಿಪಟುಗಳನ್ನು ಅಭಿನಂದಿಸಿದ್ದರು.

 

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago