Categories: ಕ್ರೀಡೆ

ಲಸಿಕೆ ಹಾಕಿಸಿಕೊಳ್ಳದಿದ್ದರೂ ಫ್ರೆಂಚ್ ಓಪನ್ ರಿಂಗ್ ನಲ್ಲಿ ನೊವಾಕ್ ಜೊಕೊವಿಕ್ ಆಡುವ ಸಾಧ್ಯತೆ!

ಪ್ಯಾರಿಸ್: ಲಸಿಕೆ ಹಾಕಿಸಿಕೊಳ್ಳದ ಕಾರಣ ಆಸ್ಟ್ರೇಲಿಯನ್ ಓಪನ್‌ನಿಂದ ಹೊರಗುಳಿದಿರುವ ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್ ಮುಂಬರುವ ಫ್ರೆಂಚ್ ಓಪನ್‌ನಲ್ಲಿ ಆಡುವ ಲಕ್ಷಣಗಳು ಗೋಚರಾವಾಗುತ್ತಿವೆ.ಫ್ರಾನ್ಸ್ ನಲ್ಲಿ ಕೋವಿಡ್ ಹೊಸ ಗೈಡ್ ಲೈನ್ಸ್  ಮುಂದಿನ ಸೋಮವಾರದಿಂದ ಜಾರಿಗೆ ಬರಲಿದ್ದು, ಅದರಲ್ಲಿ ವ್ಯಾಕ್ಸಿನ್ ಡೋಸ್ ಪಡೆಯದಿದ್ದರೂ ಪರವಾಗಿಲ್ಲ ಎಂದು ಹೇಳಿದೆ.

ಫ್ರಾನ್ಸ್ ನಲ್ಲಿ ಕೋವಿಡ್ ನಿಯಮಾವಳಿಗಳನ್ನು ಸಡಿಲಗೊಳಿಸಲಾಗುತ್ತಿದೆ.ಅದರಲ್ಲಿ ಪ್ರಮುಖವಾಗಿ ಲಸಿಕೆ ಹಾಕಿಸಿಕೊಳ್ಳದವರ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಒಂದು ಷರತ್ತನ್ನು ವಿಧಿಸಿರುವ ಫ್ರಾನ್ಸ್ ಸರ್ಕಾರ, ವ್ಯಕ್ತಿಯೊಬ್ಬ ಹಿಂದಿನ ಆರು ತಿಂಗಳಲ್ಲಿ ಕೋವಿಡ್ ಗೆ ತುತ್ತಾಗಿರಬಾರದು. ಈ ವರದಿಯನ್ನು ಹೊಂದಿದ್ದರೆ ಫ್ರಾನ್ಸ್ ಪ್ರವೇಶ ಮಾಡಲು ಕಡ್ಡಾಯ ಲಸಿಕೆಯಿಂದ ವಿನಾಯಿತಿ ಇದೆ ಎಂಬ ಹೊಸ ನಿಯಮವನ್ನು ಅಳವಡಿಸಿಕೊಂಡಿದೆ.

ಇದು ಜಾಕೊವಿಕ್ ಗೆ ಫ್ರಾನ್ಸ್ ಪ್ರವೇಶಕ್ಕೆ ಹಾದಿ ಸುಗಮವಾದಂತಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಆಸ್ಟ್ರೇಲಿಯನ್ ಓಪನ್‌ ಸಮಯದಲ್ಲಿ ಜಾಕೋಗೆ ಸೋಂಕು ಧೃಢಪಟ್ಟಿತ್ತು ಎಂದು ಅವರೇ ಬಹಿರಂಗಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜೊಕೊವಿಕ್ ಅವರು ಮುಂದಿನ ಗ್ರ್ಯಾಂಡ್ ಸ್ಲಾಮ್ ಪಂದ್ಯಾವಳಿಯಾದ ಮೇ ಮತ್ತು ಜೂನ್‌ನಲ್ಲಿ ಫ್ರೆಂಚ್ ಓಪನ್‌ನಲ್ಲಿ ಆಡಬಹುದು.

Swathi MG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago