ನವದೆಹಲಿ: ಶ್ರೀಲಂಕಾ ವಿರುದ್ಧ ಭಾನುವಾರ ಮೊದಲ ಟಿ-20 ಪಂದ್ಯವನ್ನು ಆಡಲಿರುವ ವಿರಾಟ್ ಕೊಹ್ಲಿ ಪಡೆಯು ಭದ್ರತಾ ಕಾರಣಗಳಿಂದಾಗಿ ಗುವಾಹಟಿಯ ಬರಸ್ಪಾರ ಸ್ಟೇಡಿಯಂನಲ್ಲಿ ಆಡುವುದು ಸಂಶಯವೆನಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿ ಈಗ ಪರಿಸ್ಥಿತಿಯು ಸಾಮಾನ್ಯವಾಗಿದ್ದರೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮತ್ತು ಅಸ್ಸಾಂ ಕ್ರಿಕೆಟ್ ಅಸೋಸಿಯೇಶನ್(ಎಸಿಎ) ಇದರ ಬಗ್ಗೆ ಹದ್ದಿನ ಕಣ್ಣಿಟ್ಟಿದೆ.
ಈಗ ಎಲ್ಲವೂ ನಿಯಂತ್ರಣದಲ್ಲಿ ಇದೆ ಎಂದು ಎಸಿಎ ಅಧ್ಯಕ್ಷ ರೊಮೆನ್ ದತ್ತಾ ಅವರು ಹೇಳಿದ್ದಾರೆ.
ಪೊಲೀಸರಿಗೆ ಭದ್ರತೆಯ ಜವಾಬ್ದಾರಿ ನೀಡಲಾಗಿದೆ ಮತ್ತು ಈಗ ಎಲ್ಲವೂ ನಿಯಂತ್ರಣದಲ್ಲಿ ಇದೆ ಎಂದು ದತ್ತಾ ಅವರು ತಿಳಿಸಿದರು.
ಮೊದಲು ಇಲ್ಲಿ ಸ್ವಲ್ಪ ಮಟ್ಟಿನ ಪ್ರತಿಭಟನೆ ನಡೆದಿದೆ. ಆದರೆ ಈಗ ಎಲ್ಲವೂ ನಿಯಂತ್ರಣದಲ್ಲಿ ಇದೆ. ಎರಡು ತಂಡಗಳ ಸಹಿತ ಸ್ಟೇಡಿಯಂ ಮತ್ತು ಇತರ ಎಲ್ಲಾ ಜವಾಬ್ದಾರಿಗಳನ್ನು ನಾವು ಪೊಲೀಸರಿಗೆ ಒಪ್ಪಿಸಿದ್ದಾಏವೆ. ಅವರು ಎಲ್ಲವೂ ನಿಯಂತ್ರಣದಲ್ಲಿ ಇದೆ ಎನ್ನುವುದನ್ನು ದೃಢಪಡಿಸಿದ್ದಾರೆ ಎಂದರು.