ಕೊಲಂಬೊ: ಭಾರತ-ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು 7 ವಿಕೆಟ್ ಗಳ ಜಯಗಳಿಸಿದೆ.
ಆರಂಭಿಕರಾದ ಪೃಥ್ವಿ ಶಾ (43) ಮತ್ತು ಶಿಖರ್ ಧವನ್ (ಅಜೇಯ 86) ಅವರ ಬಿರುಸಿನ ಆಟದ ಬಲದಿಂದ ಟೀಮ್ ಇಂಡಿಯಾ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಏಳು ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0ಯಿಂದ ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 50 ಓವರ್ ಗಳಲ್ಲಿ 9 ವಿಕೆಟ್ ಗೆ 262 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 36.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 263 ರನ್ ಸೇರಿಸಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಶಿಖರ್ ಧನವ್ ಮೊದಲ ಬಾರಿ ನಾಯಕನಾಗಿ ಭಾರತ ಕ್ರಿಕೆಟ್ ತಂಡದ ನೇತೃತ್ವ ವಹಿಸಿದ್ದರು.