News Karnataka Kannada
Sunday, May 19 2024
ಕ್ರೀಡೆ

ಹಸೆಮಣೆ ಏರಿದ ಕ್ರಿಕೆಟಿಗ ರಾಬಿನ್ ಉತ್ತಪ್ಪ

Photo Credit :

ಹಸೆಮಣೆ ಏರಿದ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಮಡಿಕೇರಿ: ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಕೊಡಗಿನ ರಾಬಿನ್ ಉತ್ತಪ್ಪ ಅವರು ಮಡಿಕೇರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದೀರ್ಘಕಾಲದ ಗೆಳತಿ ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಶೀತಲ್ ಗೌತಮ್ ಅವರೊಂದಿಗೆ ಭಾನುವಾರ ನಗರದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೊಡಗಿನ ಸಂಪ್ರದಾಯದಂತೆ ಹಸೆಮಣೆಗೇರಿದರು.

ಕೊಡವ ಸಂಪ್ರದಾಯದಂತೆ ಶೀತಲ್ ಅವರನ್ನು ವರಿಸಿಕೊಂಡ ರಾಬಿನ್ ಉತ್ತಪ್ಪ, ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು. ಕುಟುಂಬ ಸದಸ್ಯರಿಗೆ ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಕಳೆದ ನವೆಂಬರ್ ತಿಂಗಳಿನಲ್ಲಿ ಹೊರ ದೇಶದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಇವರು, ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಸಂಪ್ರದಾಯದಂತೆ ಸರಳವಾಗಿ ಮದುವೆಯಾಗುವುದಾಗಿ ಈ ಹಿಂದೆಯೇ ಘೊಷಿಸಿಕೊಂಡಿದ್ದರು. ಅಂತರಾಷ್ಟ್ರೀಯ ಆಟಗಾರರಾಗಿರುವ ರಾಬಿನ್ ಕೊಡಗು ಜಿಲ್ಲೆಯಲ್ಲಿ ಹಸೆಮಣೆ ಏರಿರುವುದು ಕ್ರೀಡಾ ಜಿಲ್ಲೆಗೆ ಮತ್ತಷ್ಟು ಮೆರುಗು ತಂದಿದೆ.  

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದವರಾದ ರಾಬಿನ್ ಉತ್ತಪ್ಪ,  ಕರ್ನಾಟಕ ರಣಜಿ ತಂಡವನ್ನು ಕಳೆದ ಕೆಲವು ವರ್ಷಗಳಿಂದ ಪ್ರತಿನಿಧಿಸುತ್ತಿದ್ದರು. ತದನಂತರದ ದಿನಗಳಲ್ಲಿ ಭಾರತ ತಂಡಕ್ಕೆ ಆಯ್ಕೆಯಾದ ಇವರು, ವಿಕೆಟ್ ಕೀಪರ್ ಆಗಿ ತನ್ನ ಪ್ರದರ್ಶನವನ್ನು ಪ್ರದರ್ಶಿಸಿದರು. ಐಪಿಎಲ್ ನಲ್ಲೂ ಆಟವಾಡಿರುವ ಇವರು,  ಅಂತರಾಷ್ಟ್ರೀಯ ಹಾಕಿ ರೆಫರಿಯಾಗಿರುವ ವೇಣು ಉತ್ತಪ್ಪ ಮತ್ತು ರೋಸಿ ಉತ್ತಪ್ಪ ದಂಪತಿಗಳ ಸುಪುತ್ರರಾಗಿದ್ದಾರೆ.

ರಾಬಿನ್ ತಾಯಿ ರೋಸಿ ಉತ್ತಪ್ಪ ಗೃಹಿಣಿಯಾಗಿದ್ದು, ಇದೀಗ ತಂದೆ ವೇಣು ಉತ್ತಪ್ಪ ಬೆಂಗಳೂರಿನಲ್ಲಿ ಖಾಸಗಿ ಹಾಕಿ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಗನ ವಿವಾಹ ಸಮಾರಂಭದಲ್ಲಿ ಇವರಿಬ್ಬರು ಕಾಣಿಸಿಕೊಂಡಿದ್ದಾರೆ.
 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು