ಬೆಳ್ತಂಗಡಿ: ಉಜಿರೆ ಶ್ರೀ ಧ .ಮಂ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜ.10 ರಂದು ನಡೆದ ಮಂಗಳೂರು ವಿ.ವಿ. ಮಟ್ಟದ ಅಂತರ್ಕಾಲೇಜು ಪುರುಷರ ಹ್ಯಾಂಡ್ ಬಾಲ್ ಟೂರ್ನಮೆಂಟ್ ನಲ್ಲಿ ಆತಿಥೇಯ ಉಜಿರೆ ಎಸ್ .ಡಿ.ಎಂ. ಕಾಲೇಜು ಪುರುಷರ ತಂಡ ಪ್ರಥಮ ಸ್ಥಾನ ಪಡೆದು ಶೀಲ್ಡ್ ಹಾಗು ಉಡುಪಿ ಅದಮಾರು ಮಠದ ಶ್ರೀ ವಿಬುಧೇಶ ತೀರ್ಥ ಸ್ವಾಮೀಜಿ ಸ್ಮಾರಕ ಪರ್ಯಾಯ ಫಲಕ ಗಳಿಸಿದ್ದಾರೆ.
ರನ್ನರ್ ಅಪ್ ಪಡೆದು ದ್ವಿತೀಯ ಸ್ಥಾನವನ್ನು ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜು ಪಡೆಯಿತು. ತೃತೀಯ ಸ್ಥಾನವನ್ನು ಮೂಡಬಿದ್ರಿಯ ಆಳ್ವಾಸ್ ಕಾಲೇಜು ತಂಡ ಹಾಗು ಚತುರ್ಥ ಸ್ಥಾನವನ್ನು ಮಂಗಳೂರಿನ ಎಸ್.ಡಿ.ಎಂ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜು ತಂಡ ಗಳಿಸಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳು ಪ್ರಶಸ್ತಿ ಹಾಗು ಪಾರಿತೋಷಕಗಳನ್ನು ವಿತರಿಸಿದರು. ಒಟ್ಟು 11 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಉತ್ತಮ ಆಟಗಾರರಾಗಿ ವಾಮದಪದವು ಸ.ಪ.ಪೂ .ಕಾಲೇಜಿನ ಹರೀಶ್ ರೆಡ್ಡಿ ಹಾಗು ಉತ್ತಮ ಗೋಲ್ ಕೀಪರ್ ಆಗಿ ಉಜಿರೆ ಎಸ್ .ಡಿ.ಎಂ.ಕಾಲೇಜಿನ ಭೀಮಣ್ಣ ವಿಶೇಷ ಪುರಸ್ಕಾರ ಗಳಿಸಿದರು.
ಎಸ್ .ಡಿ.ಎಂ ಕಾಲೇಜಿನ ಪ್ರಾಚಾರ್ಯ ಡಾ! ಪಿ.ವಿ.ಉದಯಚಂದ್ರ ಅಧ್ಯಕ್ಷತೆ ವಹಿಸಿದ್ದರು. ಎಸ್..ಡಿ.ಎಂ ಪ.ಪೂ ಕಾಲೇಜು ಪ್ರಾಂಶುಪಾಲ ದಿನೇಶ್ ಚೌಟ , ವಿದ್ಫ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ, ಕರ್ನಾಟಕ ಹ್ಯಾಂಡ್ ಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಮಾದಪ್ಪ ಕೆ.ಜಿ., ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ದೈಹಿಕ ಶಿಕ್ಷಣ ನಿರ್ದೇಶಕರಾದ ಶಾರದಾ ಹಾಗೂ ಸಂದೇಶ್ ಪೂಂಜ ಮೊದಲಾದವರು ಉಪಸ್ಥಿತರಿದ್ದರು. ಎಸ್ ಡಿ.ಎಂ ಕಾಲೇಜು ಉಪನ್ಯಾಸಕ ಡಾ.ಬಿ.ಎ .ಕುಮಾರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.