Categories: ಕ್ರೀಡೆ

2ನೇ ಟೆಸ್ಟ್ ಪಂದ್ಯ: ಅರ್ಧಶತಕ ಭಾರಿಸಿದ ಚೇತೇಶ್ವರ್ ಪೂಜಾರ-ಅಜಿಂಕ್ಯ ರಹಾನೆ

ಆಪದ್ಭಾಂದವರೆಂದೇ ಖ್ಯಾತರಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ವೈಯಕ್ತಿಕ ಅರ್ಧಶತಕಗಳನ್ನು ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಆಧರಿಸಿದ್ದಾರೆ.

ಜೊಹಾನ್ಸ್ ಬರ್ಗ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ 82 ರನ್ ಗೆ 2 ವಿಕೆಟ್ ಗಳಿಂದ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ಭೋಜನ ವಿರಾಮಕ್ಕೂ ಮುನ್ನವೇ 2 ವಿಕೆಟ್ ಗೆ 154 ರನ್ ಗಳಿಸಿದೆ.  ರನ್ ಬರ ಎದುರಿಸುತ್ತಿದ್ದ ಪೂಜಾರ ಮತ್ತು ರಹಾನೆ 3ನೇ ವಿಕೆಟ್ ಗೆ 108 ರನ್ ಜೊತೆಯಾಟ ನಿಭಾಯಿಸಿದ್ದಾರೆ. ಪೂಜಾರ 62 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ ಅರ್ಧಶತಕ ಗಳಿಸಿದರು. ರಹಾನೆ 78 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 58 ರನ್ ಗಳಿಸಿದ್ದಾಗ ರಬಡಾ ಎಸೆತದಲ್ಲಿ ಔಟಾದರು.

ಮೊದಲ ಇನಿಂಗ್ಸ್ 27 ರನ್ ಗಳ ಹಿನ್ನಡೆ ಅನುಭವಿಸಿದ್ದ ಭಾರತ ತಂಡ ಇವರಿಬ್ಬರ ಮಿಂಚಿನ ಜೊತೆಯಾಟದ ನೆರವಿನಿಂದ ಇದೀಗ 127 ರನ್ ಗಳ ಮುನ್ನಡೆ ಗಳಿಸಿ ಮುನ್ನುಗ್ಗುತ್ತಿದೆ.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

15 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

38 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

55 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago