ವಿಶಾಖಪಟ್ಟಣಂ: ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ದಿನಕ್ಕೆ ಟೀಮ್ ಇಂಡಿಯಾ 396 ರನ್ಗಳಿಗೆ ಆಲೌಟ್ ಆಗಿದೆ.
ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು ಬೃಹತ್ ರನ್ ಕಲೆಹಾಕಲು ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಆರಂಭಿಕರಾಗಿ ಕ್ರೀಸ್ಗೆ ಆಗಮಿಸಿದ್ದ ರೋಹಿತ್ ಶರ್ಮಾ ಮತ್ತು ಜೈಸ್ವಾಲ್ ಉತ್ತಮವಾದ ಬ್ಯಾಟಿಂಗ್ ಮಾಡುತ್ತಿದ್ದರು.
ಈ ವೇಳೆ ತಂಡದ ಮೊತ್ತ 40 ರನ್ ಇರುವಾಗ ರೋಹಿತ್ ಕ್ಯಾಚ್ ನೀಡಿ ಔಟ್ ಆದರು. ಗಿಲ್ 34, ಶ್ರೇಯಸ್ 27, ರಜತ್ ಪಾಟೀದರ್ 32, ಅಕ್ಷರ್ ಪಟೇಲ್ 27 ರನ್. ಇವರಿಂದ ಉತ್ತಮ ಬ್ಯಾಟಿಂಗ್ ನಿರೀಕ್ಷೆ ಮಾಡಲು ಆಗಲಿಲ್ಲ.
ಇತ್ತ ಕ್ರೀಸ್ಗೆ ಕಚ್ಚಿಕೊಂಡು ಬ್ಯಾಟಿಂಗ್ ಮಾಡುತ್ತಿದ್ದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿಯಾಗಿ 209 ರನ್ ಸಿಡಿಸಿ ತಂಡಕ್ಕೆ ನೆರವಾದರು. ಟೆಸ್ಟ್ ವೃತ್ತಿ ಜೀವನದಲ್ಲಿ ಮೊಟ್ಟ ಮೊದಲ ದ್ವಿಶತಕ ಬಾರಿಸಿದರು.
ಭಾರತದ ಪರ ವಿಕೆಟ್ ಕೀಪರ್ ಶ್ರೀಕರ ಭರತ್ 17 ರನ್ಗೆ ಔಟ್ ಆಗಿ ಮತ್ತೊಮ್ಮೆ ಬ್ಯಾಟಿಂಗ್ನಲ್ಲಿ ವಿಫಲವಾದರು. ಆರ್ ಅಶ್ವಿನ್ 20, ಕುಲ್ದೀಪ್ 8, ಬೂಮ್ರಾ 6, ಮುಖೇಶ್ ಕುಮಾರ್ ಡಗೌಟ್ ಆದರು. ಇಂಗ್ಲೆಂಡ್ ಪರ ಮಿಂಚಿನ ಬೌಲಿಂಗ್ ಮಾಡಿದ ಶೋಯೆಬ್ ಬಶೀರ್, ರೆಹಾನ್ ಅಹ್ಮದ್ ಹಾಗೂ ಜೇಮ್ಸ್ ಆಂಡರ್ಸನ್ ತಲಾ 3 ವಿಕೆಟ್ಗಳನ್ನು ಕಬಳಿಸಿ ತಂಡಕ್ಕೆ ನೆರವಾದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ