Categories: ಕ್ರೀಡೆ

2ನೇ ಟೆಸ್ಟ್​ ಪಂದ್ಯ: ಬೃಹತ್ ರನ್ ಕಲೆ ಹಾಕಿದ ಟೀಮ್​ ಇಂಡಿಯಾ

ವಿಶಾಖಪಟ್ಟಣಂ: ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್​ ಪಂದ್ಯದ 2ನೇ ದಿನಕ್ಕೆ ಟೀಮ್ ಇಂಡಿಯಾ 396 ರನ್​ಗಳಿಗೆ ಆಲೌಟ್ ಆಗಿದೆ.

ಭಾರತ ತಂಡದ ಕ್ಯಾಪ್ಟನ್​ ರೋಹಿತ್ ಶರ್ಮಾ ಟಾಸ್ ಗೆದ್ದು ಬೃಹತ್ ರನ್ ಕಲೆಹಾಕಲು ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಆರಂಭಿಕರಾಗಿ ಕ್ರೀಸ್​ಗೆ ಆಗಮಿಸಿದ್ದ ರೋಹಿತ್ ಶರ್ಮಾ ಮತ್ತು ಜೈಸ್ವಾಲ್ ಉತ್ತಮವಾದ ಬ್ಯಾಟಿಂಗ್ ಮಾಡುತ್ತಿದ್ದರು.

ಈ ವೇಳೆ ತಂಡದ ಮೊತ್ತ 40 ರನ್ ಇರುವಾಗ ರೋಹಿತ್ ಕ್ಯಾಚ್ ನೀಡಿ ಔಟ್ ಆದರು. ಗಿಲ್ 34, ಶ್ರೇಯಸ್ 27, ರಜತ್ ಪಾಟೀದರ್ 32, ಅಕ್ಷರ್ ಪಟೇಲ್ 27 ರನ್​. ಇವರಿಂದ ಉತ್ತಮ ಬ್ಯಾಟಿಂಗ್ ನಿರೀಕ್ಷೆ ಮಾಡಲು ಆಗಲಿಲ್ಲ.

ಇತ್ತ ಕ್ರೀಸ್​ಗೆ ಕಚ್ಚಿಕೊಂಡು ಬ್ಯಾಟಿಂಗ್ ಮಾಡುತ್ತಿದ್ದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿಯಾಗಿ 209 ರನ್​ ಸಿಡಿಸಿ ತಂಡಕ್ಕೆ ನೆರವಾದರು. ಟೆಸ್ಟ್​ ವೃತ್ತಿ ಜೀವನದಲ್ಲಿ ಮೊಟ್ಟ ಮೊದಲ ದ್ವಿಶತಕ ಬಾರಿಸಿದರು.

ಭಾರತದ ಪರ ವಿಕೆಟ್ ಕೀಪರ್ ಶ್ರೀಕರ ಭರತ್ 17 ರನ್​ಗೆ ಔಟ್​ ಆಗಿ ಮತ್ತೊಮ್ಮೆ ಬ್ಯಾಟಿಂಗ್​​ನಲ್ಲಿ ವಿಫಲವಾದರು. ಆರ್ ಅಶ್ವಿನ್ 20, ಕುಲ್​ದೀಪ್​ 8, ಬೂಮ್ರಾ 6, ಮುಖೇಶ್ ಕುಮಾರ್ ಡಗೌಟ್​ ಆದರು. ಇಂಗ್ಲೆಂಡ್ ಪರ ಮಿಂಚಿನ ಬೌಲಿಂಗ್ ಮಾಡಿದ ಶೋಯೆಬ್ ಬಶೀರ್, ರೆಹಾನ್ ಅಹ್ಮದ್ ಹಾಗೂ ಜೇಮ್ಸ್ ಆಂಡರ್ಸನ್ ತಲಾ 3 ವಿಕೆಟ್​ಗಳನ್ನು ಕಬಳಿಸಿ ತಂಡಕ್ಕೆ ನೆರವಾದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago