ಚೆನ್ನೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯನ್ನು ಈಗಾಗಲೇ ಗೆದ್ದುಕೊಂಡಿರುವ ಟೀಂ ಇಂಡಿಯಾ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ವೇಗಿಗಳಾದ ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ಗೆ ವಿಶ್ರಾಂತಿ ನೀಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಉಮೇಶ್ ಯಾದವ್, ಬುಮ್ರಾ ಮತ್ತು ಕುಲದೀಪ್ ಯಾದವ್ ಗೆ ಮುಂದಿನ ಟಿ-20ಯಲ್ಲಿ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ.
ಆಸ್ಟ್ರೇಲಿಯಾ ಪ್ರವಾಸಕ್ಕೆ ಮೊದಲು ಈ ಮೂವರಿಗೆ ವಿಶ್ರಾಂತಿ ನೀಡುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೂರನೇ ಟಿ-20 ಪಂದ್ಯಕ್ಕೆ ಸಿದ್ಧಾರ್ಥ ಕೌಲ್ ತಂಡ ಸೇರಿಕೊಂಡಿದ್ದಾರೆ.
3ನೇ ಟಿ-20ಗೆ ತಂಡ: ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್(ವಿ.ಕೀ), ಮನಿಷ್ ಪಾಂಡೆ, ಶ್ರೇಯಸ್ ಐಯ್ಯರ್, ರಿಷಬ್ ಪಂತ್(ವಿ.ಕೀ), ಕೃನಾಲ್ ಪಾಂಡೆ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಶಹಬಾಜ್ ನದೀಮ್, ಸಿದ್ಧಾರ್ಥ ಕೌಲ್.