Categories: ಕ್ರೀಡೆ

ಮೂರನೇ ಟೆಸ್ಟ್: 400ರ ಗಡಿಯತ್ತ ಟೀಮ್ ಇಂಡಿಯಾ

ರಾಜ್ಕೋಟ್​: ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನದಾಟದ ಆರಂಭದಲ್ಲೇ ಭಾರತ ಕುಸಿತ ಕಂಡಿತು. ಆದರೆ, ರವಿಚಂದ್ರನ್ ಅಶ್ವಿನ್ ಹಾಗೂ ಧ್ರುವ್ ಜುರೆಲ್ ಆಸರೆಯಾಗಿ ನಿಂತಿದ್ದು ತಂಡದ ಮೊತ್ತ 400ರ ಗಡಿಯತ್ತ ತಲುಪಿದೆ.

ಸದ್ಯ ಭೋಜನ ವಿರಾಮದ ವೇಳೆಗೆ ಭಾರತ 7 ವಿಕೆಟ್ ಕಳೆದುಕೊಂಡು 388 ರನ್ ಗಳಿಸಿದೆ. ಅಶ್ವಿನ್ 25 ಹಾಗೂ ಧ್ರುವ್ 31 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಮೊದಲ ದಿನ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಶತಕ ಗಳಿಸಿದರು. ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್ ಕೂಡ ಅರ್ಧಶತಕ ಗಳಿಸಿದರು.

ಇಂದು ಎರಡನೇ ದಿನ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕುಲ್ದೀಪ್ ಯಾದವ್ 4 ರನ್​ಗೆ ನಿರ್ಗಮಿಸಿದರು. ಬಳಿಕ ಆರ್. ಅಶ್ವಿನ್ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಜೊತೆಯಾಟ ಆಡಿ ಮುನ್ನುಗ್ಗುತ್ತಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್ ಪ್ಲೇಯಿಂಗ್ XI: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.

Ashika S

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

18 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

18 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

37 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

42 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

47 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

53 mins ago