ಮುಂಬೈ: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ (SMAT)ಗೂ ಕೋವಿಡ್-19 ಆಂತಕ ಮೂಡಿದ್ದು ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ 4 ಕ್ರಿಕೆಟಿಗರು ಸೋಂಕಿಗೆ ತುತ್ತಾಗಿ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.
ಮುಂಬೈ ಹಿರಿಯರ ತಂಡದ ನಾಲ್ಕು ಆಟಗಾರರು ಸೋಂಕಿಗೆ ತುತ್ತಾಗಿದ್ದು, ಟೂರ್ನಿಯಲ್ಲಿ ಪಾಲ್ಗೊಳ್ಳಲು ಮುಬೈ ವಿಮಾನ ನಿಲ್ದಾಣಕ್ಕೆ ಆಗಮಸಿದ್ದಾಗ ಆಟಗಾರರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ 4 ಆಟಗಾರರು ಸೋಂಕಿಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಅವರನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಫರಾಜ್ ಖಾನ್, ಪ್ರಶಾಂತ್ ಸೋಲಂಕಿ, ಶಮ್ಸ್ ಮುಲಾನಿ ಮತ್ತು ಸಾಯಿರಾಜ್ ಪಾಟೀಲ್ ಅವರು ಸೋಂಕಿಗೆ ತುತ್ತಾಗಿದ್ದು, ಅವರ ಸಂಪರ್ಕದಲ್ಲಿದ್ದವರಿಗೂ 7 ಐಸೊಲೇಷನ್ ನಲ್ಲಿರುವಂತೆ ಸೂಚಿಸಲಾಗಿದೆ. ಪ್ರಸ್ತುತ ಸೋಂಕಿಗೆ ತುತ್ತಾದವರನ್ನು ತಂಡದಿಂದ ಕೈ ಬಿಡಲಾಗಿದ್ದು ಅವರ ಸ್ಥಾನಕ್ಕೆ ಬೇರೆ ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಎಂಸಿಎ (ಮುಂಬೈ ಕ್ರಿಕೆಟ್ ಅಸೋಸಿಯೇಷನ್)ಮಾಹಿತಿ ನೀಡಿದೆ.