News Karnataka Kannada
Thursday, May 02 2024
ಕ್ರೀಡೆ

ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾದ ಅಂಬಾಟಿ ರಾಯುಡು

ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದು, ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಾರದ ಹಿಂದೆಯಷ್ಟೇ ವೈಎಸ್​ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ರಾಯುಡು ಒಂದೇ ವಾರದೊಳಗೆ ವೈಎಸ್​ಆರ್​ ಪಕ್ಷವನ್ನು ತೊರೆದು ರಾಜಕೀಯದಿಂದ ದೂರ ಉಳಿಯುವುದಾಗಿ ತಿಳಿಸಿದ್ದರು. ಆದರೀಗ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
Photo Credit : News Kannada

ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದು, ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಾರದ ಹಿಂದೆಯಷ್ಟೇ ವೈಎಸ್​ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ರಾಯುಡು ಒಂದೇ ವಾರದೊಳಗೆ ವೈಎಸ್​ಆರ್​ ಪಕ್ಷವನ್ನು ತೊರೆದು ರಾಜಕೀಯದಿಂದ ದೂರ ಉಳಿಯುವುದಾಗಿ ತಿಳಿಸಿದ್ದರು. ಆದರೀಗ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಮತ್ತೆ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ನನ್ನ ಸಿದ್ಧಾಂತ ಮತ್ತು ವೈಎಸ್‌ಆರ್‌ಸಿಪಿಯ ಸಿದ್ಧಾಂತಗಳು ಹೊಂದಾಣಿಕೆಯಾಗಿಲ್ಲ. ಹೀಗಾಗಿ ವೈಎಸ್‌ಆರ್‌ಸಿಪಿಯೊಂದಿಗೆ ಮುಂದುವರೆಯಲು ಸಾಧ್ಯವಾಗಿಲ್ಲ. ಇದಕ್ಕೂ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮತ್ತು x ಮತ್ತು y ಸ್ಥಾನಕ್ಕೂ ಖಂಡಿತವಾಗಿಯೂ ಯಾವುದೇ ಸಂಬಂಧವಿಲ್ಲ ಎಂದು ರಾಯುಡು ಸ್ಪಷ್ಟಪಡಿಸಿದ್ದಾರೆ.

ನಾನು ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೆ. ಆದರೆ ನನ್ನ ಹಿತೈಷಿಗಳು ಮತ್ತು ಆಪ್ತರು ಮತ್ತು ಕುಟುಂಬದವರು ಪವನ್ (ಪವನ್ ಕಲ್ಯಾಣ್) ಅಣ್ಣನ ಸಿದ್ಧಾಂತಗಳನ್ನು ಅರ್ಥಮಾಡಿಕೊಳ್ಳಲು ಒಮ್ಮೆ ಭೇಟಿಯಾಗುವಂತೆ ನನಗೆ ಹೇಳಿದ್ದರು. ಅದರಂತೆ ನಾನು ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿ ಸಾಕಷ್ಟು ಸಮಯ ಕಳೆದಿದ್ದೇನೆ. ರಾಜಕೀಯ ಮತ್ತು ಅವರನ್ನು ಅರ್ಥಮಾಡಿಕೊಳ್ಳುವುದು, ಅವರ ಸಿದ್ಧಾಂತ ಮತ್ತು ರಾಜಕೀಯ ದೃಷ್ಟಿಕೋನವು ನನ್ನಂತೆಯೇ ಇದೆ ಎಂಬುದು ಸಂತೋಷದ ವಿಷಯ. ಸದ್ಯ ನಾನು ಕ್ರಿಕೆಟ್ ಆಡಲು ದುಬೈಗೆ ಹೋಗುತ್ತಿದ್ದೇನೆ. ಅಲ್ಲದೆ ಸದಾ ಆಂಧ್ರಪ್ರದೇಶದ ಜನರ ಜೊತೆ ನಿಲ್ಲುತ್ತೇನೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು