ಏಷ್ಯಾಕಪ್ನ ಸೂಪರ್-4 ಹಂತದ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಏಷ್ಯಾಕಪ್ ಫೈನಲ್ ಆಡುವುದನ್ನು ಖಚಿತ ಪಡಿಸಿಕೊಂಡಿದೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಭಾರತ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸಿದ್ದರು.
ಆದರೆ 12ನೇ ಓವರ್ನಲ್ಲಿ ದಾಳಿಗಿಳಿದ 20 ರ ಹರೆಯದ ಯುವ ಸ್ಪಿನ್ನರ್ ದುನಿತ್ ವೆಲ್ಲಾಲಗೆ ಸ್ಪಿನ್ ಮೋಡಿಗೆ ಟೀಮ್ ಇಂಡಿಯಾ ತತ್ತರಿಸಿತು. ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗು ಹಾರ್ದಿಕ್ ಪಾಂಡ್ಯ ದುನಿತ್ ವೆಲ್ಲಾಗೆ ವಿಕೆಟ್ ಒಪ್ಪಿಸಿದರು.
ಪರಿಣಾಮ 49.1 ಓವರ್ಗಳಲ್ಲಿ ಟೀಮ್ ಇಂಡಿಯಾ 213 ರನ್ಗಳಿಸಿ ಆಲೌಟ್ ಆಯಿತು. ಶ್ರೀಲಂಕಾ ತಂಡವು 41.3 ಓವರ್ಗಳಲ್ಲಿ 172 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಏಷ್ಯಾಕಪ್ ಫೈನಲ್ ಆಡುವುದನ್ನು ಖಚಿತ ಪಡಿಸಿಕೊಂಡಿದೆ.