Categories: ಕ್ರೀಡೆ

ಏಷ್ಯನ್ ಗೇಮ್ಸ್‌ 2023ಗೆ ವೈಭವದ ತೆರೆ : ಮುಂದಿನ ವರ್ಷ ಎಲ್ಲಿ ಆತಿಥ್ಯ ?

ಹ್ಯಾಂಗ್‌ಝೌ: ಕಳೆದ ಎರಡು ವಾರಗಳ ಕಾಲ ನಡೆದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್‌ಗೆ ವೈಭವದ ತೆರೆ ಬಿದ್ದಿದೆ. 45 ರಾಷ್ಟ್ರಗಳ ಕ್ರೀಡಾಪಟುಗಳ ನಡುವೆ ಪದಕಗಳಿಗಾಗಿ ಭಾರಿ ಪೈಪೋಟಿಗೆ ಸಾಕ್ಷಿಯಾದ ಈ ಕ್ರೀಡಾಕೂಟವು ಸ್ನೇಹ, ವಿಶ್ವಾಸವನ್ನು ಮುಂದುವರೆಸುವ, ಕ್ರೀಡಾ ಸ್ಪೂರ್ತಿಯನ್ನು ಎತ್ತಿಹಿಡಿಯುವ ಶಪಥದೊಂದಿಗೆ ಮುಕ್ತಾಯವಾಯಿತು.

ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭಗೊಂಡಿದ್ದ ಕ್ರೀಡಾಕೂಟಕ್ಕೆ ಆಯೋಜಕರು ಅಷ್ಟೇ ಆಕರ್ಷಕ ಸಮಾರೋಪ ಸಮಾರಂಭವನ್ನು ಆಯೋಜಿಸಿದ್ದರು. ಲೇಸರ್ ಶೋ, ಆಗಸದಲ್ಲಿ ಚಿತ್ತಾರ ಮೂಡಿಸಿದ ಸಿಡಿ ಮದ್ದುಗಳನ್ನು ಕಂಡು ಮೂಕವಿಸ್ಮಿತರಾದ ಪ್ರೇಕ್ಷಕರು, ನೃತ್ಯ, ಸಂಗೀತದ ಸುಧೆಯಲ್ಲಿ ಮುಳುಗೆದ್ದರು. ಕ್ರೀಡಾಕೂಟದ ಕೆಲ ರೋಚಕ ಕ್ಷಣಗಳನ್ನು ದೊಡ್ಡ ಪರದೆಯ ಮೇಲೆ ಪ್ರದರ್ಶಿಸಿ, ಆ ಕ್ಷಣಗಳನ್ನು ಮೆಲುಕು ಹಾಕಲಾಯಿತು.

ಈ ಬಾರಿ 19ನೇ ಏಷ್ಯನ್​ ಗೇಮ್ಸ್​ನಲ್ಲಿ ಭಾರತ 28 ಚಿನ್ನದ ಪದಕ ಸೇರಿ 107 ಪದಕ ಗೆದ್ದು, ಐತಿಹಾಸಿಕ ಸಾಧನೆಯೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಅಂತ್ಯಗೊಳಿಸಿದೆ.

ಸಮಾರೋಪ ಸಮಾರಂಭದಲ್ಲಿ ಪಥಸಂಚಲನ ನಡೆಯಿತು. ಎಲ್ಲಾ 45 ರಾಷ್ಟ್ರಗಳ ಕ್ರೀಡಾಪಟುಗಳು, ಸಿಬ್ಬಂದಿ ಪಾಲ್ಗೊಂಡರು. ಭಾರತದ ಅಂದಾಜು 100 ಕ್ರೀಡಾಪಟುಗಳು, ಸಿಬ್ಬಂದಿ ಪಥಸಂಚಲನದಲ್ಲಿ ಪಾಲ್ಗೊಂಡರು. ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಭಾರತದ ಧ್ವಜಧಾರಿಯಾಗಿದ್ದರು.

ಏಷ್ಯಾ ಒಲಿಂಪಿಕ್ ಸಮಿತಿ(ಒಸಿಎ)ಯ ಹಂಗಾಮಿ ಅಧ್ಯಕ್ಷ ರಣ್‌ಧೀರ್ ಸಿಂಗ್ ಕ್ರೀಡಾಕೂಟವು ಅಧಿಕೃತವಾಗಿ ಮುಕ್ತಾಯಗೊಂಡಿದೆ ಎಂದು ಘೋಷಿಸಿ, ಕ್ರೀಡಾಕೂಟದ ಧ್ವಜ ಹಾಗೂ ಕ್ರೀಡಾ ಜ್ಯೋತಿಯನ್ನು 2026ರ ಗೇಮ್ಸ್‌ಗೆ ಆತಿಥ್ಯ ವಹಿಸುವ ಜಪಾನ್‌ಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ರಣ್‌ಧೀರ, ‘ಏಷ್ಯಾದ ಯುವಕರು ಏಷ್ಯನ್ ಗೇಮ್ಸ್‌ ಅನ್ನು ಭ್ರಾತೃತ್ವದ ಭಾವನೆಯೊಂದಿಗೆ ಸಂಭ್ರಮಿಸಲಿ ಎಂದು ಆಶಿಸುತ್ತೇನೆ’ ಎಂದರು. ಜಪಾನ್‌ನ ಐಚಿ ಹಾಗೂ ನಗೊಯಾದಲ್ಲಿ 20ನೇ ಆವೃತ್ತಿಯ ಏಷ್ಯಾಡ್‌ ನಡೆಯಲಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

1 hour ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago