News Karnataka Kannada
Saturday, May 11 2024
ಕ್ರೀಡೆ

ನಿವೃತ್ತಿ ಘೋಷಿಸಿದ ಬ್ಯಾಡ್ಮಿಂಟನ್ ತಾರೆ ಸಾಯಿ ಪ್ರಣೀತ್

Pranit
Photo Credit : News Kannada

ದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಬಿ ಸಾಯಿ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದ ಸಾಯಿ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಏಕೆಂದರೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್ ನಡೆಯಲಿದ್ದು, ಇದಕ್ಕೂ ಮುನ್ನ 31 ವರ್ಷದ ಅನುಭವಿ ಆಟಗಾರ ಬ್ಯಾಡ್ಮಿಂಟನ್ ಕೋರ್ಟ್​​ಗೆ ವಿದಾಯ ಹೇಳಿರುವುದು ಭಾರತದ ಪಾಲಿಗೆ ಹಿನ್ನಡೆಯಾಗಿದೆ.

ಪ್ರಣೀತ್ 2019ರಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಟೂರ್ನಿಯಲ್ಲಿ ಪದಕ ಗೆದ್ದ ದೇಶದ ಕೆಲವೇ ಆಟಗಾರರಲ್ಲಿ ಇವರು ಒಬ್ಬರು. ಆದರೆ, ಪ್ರಣೀತ್ ಚಿಕ್ಕ ವಯಸ್ಸಿನಲ್ಲೇ ವೃತ್ತಿ ಜೀವನಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ ಎಂದು ತಿಳಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್-2020 ರಲ್ಲಿ ಕಾಣಿಸಿಕೊಂಡಿದ್ದ ಪ್ರಣೀತ್ ಆ ಬಳಿಕ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಇದೀಗ ಈ ಸಮಸ್ಯೆಯು ಬಿಗಡಾಯಿಸಿರುವ ಕಾರಣ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು