Categories: ಕ್ರೀಡೆ

ಕ್ರಿಕೆಟ್ ಆಟಗಾರರನ್ನು ನಿಯಂತ್ರಿಸಲು ಹೊಸ ಆದೇಶ ಹೊರಡಿಸಿದ ಬಿಸಿಸಿಐ

ಕ್ರಿಕೆಟ್ ಆಟಗಾರರನ್ನು ನಿಯಂತ್ರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸ ಆದೇಶ ಹೊರಡಿಸಿದೆ. ಇನ್ನು ಮುಂದೆ ದೇಶೀಯ ಪಂದ್ಯಗಳನ್ನು ಆಡದೆ ತಂಡಕ್ಕೆ ಮರಳಲು ಅವಕಾಶ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.

ದೇಶೀಯ ಕ್ರಿಕೆಟ್ ತೊರೆದು ತಿಂಗಳ ಮೊದಲೇ ಐಪಿಎಲ್ ತಯಾರಿ ಆರಂಭಿಸುವ ಮನೋಭಾವದಿಂದ ಬಿಸಿಸಿಐ ಸಂತುಷ್ಟರಾಗಿಲ್ಲ ಎಂದು ವರದಿಯೊಂದು ಹೇಳಿದೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಆಟಗಾರರು ರಣಜಿ ಟ್ರೋಫಿಯನ್ನು ಆಡಬೇಕು ಎಂದು ಬಿಸಿಸಿಐ ಮೂಲ ತಿಳಿಸಿದೆ. ರೆಡ್ ಬಾಲ್ ಕ್ರಿಕೆಟ್ ಅದರಲ್ಲೂ ರಣಜಿ ಟ್ರೋಫಿ ಬಗ್ಗೆ ಟೀಮ್ ಇಂಡಿಯಾದ ಕೆಲವು ಆಟಗಾರರ ವರ್ತನೆಯಿಂದ ಬಿಸಿಸಿಐ ಅಧಿಕಾರಿಗಳು ಕೋಪಗೊಂಡಿದ್ದಾರೆ ಎಂದು ವರದಿಯಾಗಿದೆ.

ಇಶಾನ್ ಕಿಶನ್ ರಣಜಿಯಲ್ಲಿ ಆಡದಿರುವ ಬಗ್ಗೆ ಭಾರೀ ಕೋಲಾಹಲ ಎದ್ದಿತ್ತು. ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯದಲ್ಲಿ ವಿಶ್ರಾಂತಿ ಪಡೆದ ನಂತರ ಇಶಾನ್ ತಂಡದಿಂದ ಹೊರಗುಳಿದಿದ್ದರು. ಅಂದಿನಿಂದ ಅವರು ಯಾವುದೇ ಕ್ರಿಕೆಟ್ ಆಡುತ್ತಿಲ್ಲ. ಇಶಾನ್ ಮರಳಿ ಬರಬೇಕಾದರೆ ಮೊದಲು ರಣಜಿ ಆಡಲಿ ಎಂದು ಕೋಚ್ ರಾಹುಲ್ ದ್ರಾವಿಡ್ ಕೂಡ ಹೇಳಿದ್ದರು. ಅತ್ತ ಜಾರ್ಖಂಡ್ ತಂಡ ಹಲವು ರಣಜಿ ಪಂದ್ಯಗಳಲ್ಲಿ ಭಾಗವಹಿಸಿದ್ದರೂ ಒಮ್ಮೆಯೂ ಇಶಾನ್ ಕಾಣಿಸಿಕೊಂಡಿರಲಿಲ್ಲ.

ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ 2023ರ ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಅಲ್ಲಿಂದೀಚೆಗೆ ಅವರ ಚೇತರಿಕೆಯ ಹಲವು ವಿಡಿಯೋಗಳು ಹೊರಬಂದಿವೆ. ಆದರೆ ಅವರು ಹಿಂದಿರುಗುವ ಸುದ್ದಿ ಬರುತ್ತಿರುವುದು ಐಪಿಎಲ್‌ನಲ್ಲಿ ಮಾತ್ರ. ಹಾರ್ದಿಕ್ ವರ್ಷಗಳ ಕಾಲ ಟೆಸ್ಟ್ ಕ್ರಿಕೆಟ್ ಆಡಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಇದೀಗ ಬಿಸಿಸಿಐ ಇಂಥ ಆಟಗಾರರಿಗೆ ಎಚ್ಚರಿಕೆ ನೀಡುವತ್ತ ಚಿತ್ತ ನೆಟ್ಟಿದ್ದು, ದೇಶೀಯ ಪಂದ್ಯಗಳನ್ನು ಆಡದೆ ತಂಡಕ್ಕೆ ಮರಳಲು ಅವಕಾಶ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಮಾಡಿದೆ. ಇದೀಗ ಆಟಗಾರರಿಗೆ ಸಂಕಷ್ಟ ಎದುರಾಗಿದೆ.

Gayathri SG

Recent Posts

ಬಸ್‌,ಲಾರಿ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ವಾಹನ, 6 ಮಂದಿ ಸಾವು

ಬಸ್‌ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಸಜೀವ ದಹನಹೊಂದಿರುವ ಘಟನೆ ಘಟನೆ…

5 mins ago

ʼನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಂಡಾಯ, ಪಕ್ಷೇತರ ಸ್ಫರ್ಧೆ ಅಲ್ಲ ಶಿಕ್ಷಕ ಪ್ರತಿನಿಧಿಯಾಗಿ ಸ್ಫರ್ಧೆʼ

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಈ ಬಾರಿ ಕರಾವಳಿ ಜಿಲ್ಲೆೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು…

10 mins ago

ತರಕಾರಿ, ಬೇಳೆ ಕಾಳು, ಹಣ್ಣು, ಮಾಂಸ ದರ ಭಾರೀ ಏರಿಕೆ

ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…

43 mins ago

ತಾಮ್ರದ ಗಣಿಯೊಳಗೆ ಸಿಲುಕಿದ್ದ 14 ಅಧಿಕಾರಿಗಳ ರಕ್ಷಣೆ

ಕೋಲಿಹಾನ್‌ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…

47 mins ago

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

1 hour ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

2 hours ago