ಮುಂಬೈ: ಭಾರತ ಕ್ರಿಕೆಟ್ ತಂಡ ಸ್ಟಾರ್ ಆಟಗಾರರು ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್. ಇವರನ್ನು ಆದಷ್ಟು ಬೇಗ ಗುಣಮುಖರಾಗಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಎಲ್ಲಿಲ್ಲದ ಪ್ರಯತ್ನ ನಡೆಸುತ್ತಿದೆ.
ಸೂರ್ಯಕುಮಾರ್ ಯಾದವ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿರುವ ಬಿಸಿಸಿಐ, ಇದೀಗ ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ ಅವರನ್ನು ಕೂಡ ವಿದೇಶಕ್ಕೆ ಕಳುಹಿಸಲು ನಿರ್ಧಾರ ಮಾಡಿದೆ.
ಮೊಹಮ್ಮದ್ ಶಮಿ ಪಾದದ ಗಾಯಕ್ಕೆ ಒಳಗಾಗಿದ್ದರು. ವಿಶ್ವಕಪ್ ಬಳಿಕ ಇವರು ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಗುಳಿದಿದ್ದರು. ಪ್ರಸ್ತುತ, ಶಮಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಶಮಿ ತಜ್ಞ ವೈದ್ಯರನ್ನು ಸಂಪರ್ಕಿಸಲು ಶಮಿ ಲಂಡನ್ಗೆ ತೆರಳಲಿದ್ದಾರೆ.
ರಿಷಭ್ ಪಂತ್ ಅವರನ್ನು ಕೂಡ ಬಿಸಿಸಿಐ ಶೀಘ್ರದಲ್ಲೇ ಲಂಡನ್ಗೆ ಕಳುಹಿಸಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ. 30 ಡಿಸೆಂಬರ್ 2022 ರಂದು ದೆಹಲಿಯಿಂದ ರೂರ್ಕಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದಾಗ ಪಂತ್ ಕಾರು ಅಪಘಾತಕ್ಕೊಳಗಾದರು. ಈ ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದರು.
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…